Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ ಅಂಬರೀಶ್ ಹಾಗೂ ಸುಮಲತಾಗೆ ಜೆಡಿಎಸ್ ನವರು ಅವಮಾನ ಮಾಡುತ್ತಿದ್ದಾರೆ-ಬಿಎಸ್ ವೈ ಕಿಡಿ

ಮಂಡ್ಯದಲ್ಲಿ ಅಂಬರೀಶ್ ಹಾಗೂ ಸುಮಲತಾಗೆ ಜೆಡಿಎಸ್ ನವರು ಅವಮಾನ ಮಾಡುತ್ತಿದ್ದಾರೆ-ಬಿಎಸ್ ವೈ ಕಿಡಿ
ಬೀದರ್ , ಗುರುವಾರ, 4 ಏಪ್ರಿಲ್ 2019 (16:34 IST)
ಬೀದರ್ : ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಹಾಗೂ ದಿವಂಗತ ಅಂಬರೀಷ್ ಅವರನ್ನು ಅಪಮಾನ ಮಾಡುತ್ತಿರುವುದು ಇಡೀ ರಾಜ್ಯದಲ್ಲಿ ಪರಿಣಾಮ ಬೀರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.


ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಅಂಬರೀಷ್ ಅವರು ಮೃತಪಟ್ಟಾಗ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ಸಾರ್ವಜನಿಕ ದರ್ಶನಕ್ಕೆ ತೆಗೆದುಕೊಂಡು ಹೋಗಿದ್ದ ಸಿಎಂ ಹೆಚ್ ಡಿ ಕುಮಾರಸ್ವಾಮಿ ಈಗ ಮಂಡ್ಯಕ್ಕೆ ಅಂಬರೀಷ್ ಅವರ ಕೊಡುಗೆ ಏನು ಎಂದು ಪ್ರಶ್ನಿಸುವ ಮೂಲಕ ಅಂಬರೀಷ್ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.


ಜೆಡಿಎಸ್ ನವರು ಅವರ ಸೊಕ್ಕು ಹಾಗೂ ಧಿಮಾಕಿನ ಮಾತುಗಳಿಂದ ಸುಮಲತಾಗೆ ಅಪಮಾನ ಮಾಡುತ್ತಿದ್ದಾರೆ. ಇದರಿಂದ ಬೇಸತ್ತಿರುವ ಜನತೆ ಜೆಡಿಎಸ್ ವಿರುದ್ಧ ತಿರುಗಿ ಬಿದ್ದಿದ್ದು, ಮಂಡ್ಯದಲ್ಲಿ 100 ಕ್ಕೆ 100 ರಷ್ಟು ಸುಮಲತಾ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನ ಪ್ರಣಾಳಿಕೆ ನೋಡಿ ಸೋನಿಯಾ ಗಾಂಧಿ ಗರಂ ಆಗಿದ್ದು ಯಾಕೆ ಗೊತ್ತಾ?