Select Your Language

Notifications

webdunia
webdunia
webdunia
webdunia

ಸಚಿವ ಕಾಗೋಡು ತಿಮ್ಮಪ್ಪ ವಯಸ್ಸಿಗೆ ತಕ್ಕಂತೆ ಮಾತನಾಡಲಿ: ಎಚ್‌ಡಿಕೆ ತಿರುಗೇಟು

ಸಚಿವ ಕಾಗೋಡು ತಿಮ್ಮಪ್ಪ ವಯಸ್ಸಿಗೆ ತಕ್ಕಂತೆ ಮಾತನಾಡಲಿ: ಎಚ್‌ಡಿಕೆ ತಿರುಗೇಟು
ಬೆಂಗಳೂರು , ಗುರುವಾರ, 25 ಆಗಸ್ಟ್ 2016 (14:41 IST)
ಕಂದಾಯ ಸಚಿವ ಕಾಗೋಡು ತಿಮ್ಮಪ್ಪನವರಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯ ನನಗಿಲ್ಲ. ಅವರಿಗೆ ವಯಸ್ಸಾಗಿದೆ. ವಯಸ್ಸಿಗೆ ತಕ್ಕಂತೆ ಮಾತನಾಡಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
 
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಧರಣಿ ನಡೆಸುತ್ತಿದ್ದೇವೆ. ರಾಜಕೀಯ ಹಿತಾಸಕ್ತಿಗಾಗಿ ಧರಣಿ ನಡೆಸುತ್ತಿಲ್ಲ. ರಾಜ್ಯದ ರೈತರ ಮೇಲೆ ಸವಾರಿ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರೈತರ ಪಾಡನ್ನು ಕೇಂದ್ರ ಹಾಗೂ ತಮಿಳುನಾಡು ಸರಕಾರಕ್ಕೆ ತಿಳಿಸುವು ಉದ್ದೇಶದಿಂದ ಧರಣೆ ನಡೆಸುತ್ತಿದ್ದೇವೆ ಎಂದು ಹೇಳಿದರು.
 
ರೈತರ ಪಾಡು ಹಾಗೂ ನೀರಾವರಿ ಕುರಿತು ಸಚಿವರಿ ಏನು ಗೊತ್ತು. ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡಲು ನಿಮ್ಮನ್ನು ಮಂಡ್ಯ ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಡ್ಯ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.  

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಆಕರ್ಷಕ ವ್ಯಕ್ತಿತ್ವವಿಲ್ಲವೆಂದು ಗಗನ ಸಖಿ ಕೆಲಸ ಸಿಗಲಿಲ್ಲ: ಸ್ಮೃತಿ ಇರಾನಿ