Webdunia - Bharat's app for daily news and videos

Install App

ಶಾಸಕರ ಸ್ಥಾನ ತಾತ್ಕಾಲಿಕ, ಶಾಸಕರು ಸ್ವಲ್ಪ ತಗ್ಗಿ ಬಗ್ಗಿ ನಡೆಯಲಿ: ಬಾಲಕೃಷ್ಣಗೆ ಎಚ್‌ಡಿಕೆ ಟಾಂಗ್

Webdunia
ಗುರುವಾರ, 19 ಜನವರಿ 2017 (13:28 IST)
ಕುದೂರು ಠಾಣೆಯಲ್ಲಿ ಮಾಗಡಿ ಶಾಸಕರ ದರ್ಪಕ್ಕೆ ಸಂಬಂಧಿಸಿದಂತೆ ಶಾಸಕರ ಸ್ಥಾನ ತಾತ್ಕಾಲಿಕವಾಗಿರುವಂತದ್ದು, ಹೀಗಾಗಿ ಶಾಸಕರಾದವರು ಸ್ವಲ್ಪ ತಗ್ಗಿ ಬಗ್ಗಿ ನಡೆಯುವುದು ಸೂಕ್ತ ಎಂದು ಶಾಸಕ ಎಚ್‌.ಸಿ.ಬಾಲಕೃಷ್ಣಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಬೆಂಗಳೂರಿನ ಯುಬಿ ಸಿಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರೊಂದಿಗೆ ಹೋಗಿ ಬೆದರಿಕೆ ಹಾಕಿದರೆ ಬೆಂಬಲ ಸಿಗುತ್ತೆ ಎಂದು ಹಲವು ಶಾಸಕರ ಭಾವನೆ. ಎಚ್‌.ಸಿ.ಬಾಲಕೃಷ್ಣ 4 ಬಾರಿ ಶಾಸಕರಾದವರು. ಅವರಿಗೆ ಅನುಭವದ ಕೊರತೆ ಇಲ್ಲ. ಈ ಹಿಂದೆಯೂ ಎಚ್‌.ಸಿ.ಬಾಲಕೃಷ್ಣ ಇದೇ ರೀತಿ ವರ್ತಿಸಿದ್ದಾರೆ ಎಂದು ದೂರಿದರು. 
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ನಾನು ಹಾಗೂ ಎಚ್.ಡಿ.ರೇವಣ್ಣ ಮಾತ್ರ ಕಣಕ್ಕಿಳಿಯುತ್ತೇವೆ. ಇದರಲ್ಲಿ ಬೇರೆ ಮಾತಿಲ್ಲ. ಪದೇ ಪದೇ ಇದನ್ನೇ ಹೇಳುತ್ತಿದ್ದರೆ ತಪ್ಪು ಸಂದೇಶ ರವಾನೆಯಾಗುತ್ತೆ ಎಂದರು.
 
2018 ರ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿಲ್ಲ. ಈ ಕುರಿತು ಇನ್ನಷ್ಟೇ ಚರ್ಚಿಸಬೇಕಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments