Webdunia - Bharat's app for daily news and videos

Install App

ಮಂಡ್ಯದಿಂದ ಸ್ಪರ್ಧಿಸಲು ಎಚ್ ಡಿ ಕುಮಾರಸ್ವಾಮಿಗೆ ಒತ್ತಾಯ

Krishnaveni K
ಗುರುವಾರ, 7 ಮಾರ್ಚ್ 2024 (10:53 IST)
ಮಂಡ್ಯ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿಗೆ ಒತ್ತಡ ಬರುತ್ತಿದೆ. ಜೆಡಿಎಸ್ ನಾಯಕರೇ ಮಂಡ್ಯದಿಂದ ಸ್ಪರ್ಧಿಸಲು ಕುಮಾರಸ್ವಾಮಿ ಮೇಲೆ ಒತ್ತಡ ಹೇರುತ್ತಿದ್ದಾರೆ.

ಬಿಜೆಪಿ ಜೊತೆಗೆ ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಂಡ್ಯ ಕ್ಷೇತ್ರದ ಟಿಕೆಟ್ ಗಾಗಿ ಪಟ್ಟು ಹಿಡಿದಿದೆ. ಆದರೆ ಇನ್ನೊಂದೆಡೆ ಮಂಡ್ಯದಿಂದಲೇ ಬಿಜೆಪಿಯಿಂದ ಸ್ಪರ್ಧಿಸುವುದಾಗಿ ಸುಮಲತಾ ಅಂಬರೀಶ್ ಹಠ ಹಿಡಿದು ಕುಳಿತಿದ್ದಾರೆ. ಇದೇ ಸಂದರ್ಭದಲ್ಲಿ ಜೆಡಿಎಸ್ ನಾಯಕರು ಕುಮಾರಸ್ವಾಮಿಗೆ ಮಂಡ್ಯ ಟಿಕೆಟ್ ಗೆ ಬೇಡಿಕೆಯಿಡಲು ಸೂಚಿಸಿದ್ದಾರೆ.

ಆದರೆ ಕುಮಾರಸ್ವಾಮಿಗೆ ಸದ್ಯಕ್ಕೆ ಮಂಡ್ಯದಿಂದ ಸ್ಪರ್ಧಿಸುವ ಇರಾದೆ ಇಲ್ಲ ಎನ್ನಲಾಗಿದೆ. ಹಾಗಿದ್ದರೆ ಅವರ ಬದಲು ಪುಟ್ಟರಾಜು ಅವರನ್ನಾದರೂ ಕಣಕ್ಕಿಳಿಸಿ. ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಡಿ ಎಂದು ಕುಮಾರಸ್ವಾಮಿಗೆ ಜೆಡಿಎಸ್ ನಾಯಕರು ಒತ್ತಾಯ ಮಾಡಿದ್ದಾರಂತೆ.

ಸದ್ಯಕ್ಕೆ ಪಕ್ಷದಲ್ಲಿರುವ ಭಿನ್ನಮತ ನಿವಾರಿಸೋಣ. ಮಂಡ್ಯದಿಂದ ಒಮ್ಮತದ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ. ಬಿಜೆಪಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳೋಣ ಎಂದು ಕುಮಾರಸ್ವಾಮಿಯವರು ತಮ್ಮ ಪಕ್ಷದ ಮುಖಂಡರನ್ನು ಸಮಾಧಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments