Webdunia - Bharat's app for daily news and videos

Install App

ಮಂಡ್ಯದಿಂದ ಸ್ಪರ್ಧಿಸಲು ಎಚ್ ಡಿ ಕುಮಾರಸ್ವಾಮಿಗೆ ಒತ್ತಾಯ

Krishnaveni K
ಗುರುವಾರ, 7 ಮಾರ್ಚ್ 2024 (10:53 IST)
ಮಂಡ್ಯ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿಗೆ ಒತ್ತಡ ಬರುತ್ತಿದೆ. ಜೆಡಿಎಸ್ ನಾಯಕರೇ ಮಂಡ್ಯದಿಂದ ಸ್ಪರ್ಧಿಸಲು ಕುಮಾರಸ್ವಾಮಿ ಮೇಲೆ ಒತ್ತಡ ಹೇರುತ್ತಿದ್ದಾರೆ.

ಬಿಜೆಪಿ ಜೊತೆಗೆ ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಂಡ್ಯ ಕ್ಷೇತ್ರದ ಟಿಕೆಟ್ ಗಾಗಿ ಪಟ್ಟು ಹಿಡಿದಿದೆ. ಆದರೆ ಇನ್ನೊಂದೆಡೆ ಮಂಡ್ಯದಿಂದಲೇ ಬಿಜೆಪಿಯಿಂದ ಸ್ಪರ್ಧಿಸುವುದಾಗಿ ಸುಮಲತಾ ಅಂಬರೀಶ್ ಹಠ ಹಿಡಿದು ಕುಳಿತಿದ್ದಾರೆ. ಇದೇ ಸಂದರ್ಭದಲ್ಲಿ ಜೆಡಿಎಸ್ ನಾಯಕರು ಕುಮಾರಸ್ವಾಮಿಗೆ ಮಂಡ್ಯ ಟಿಕೆಟ್ ಗೆ ಬೇಡಿಕೆಯಿಡಲು ಸೂಚಿಸಿದ್ದಾರೆ.

ಆದರೆ ಕುಮಾರಸ್ವಾಮಿಗೆ ಸದ್ಯಕ್ಕೆ ಮಂಡ್ಯದಿಂದ ಸ್ಪರ್ಧಿಸುವ ಇರಾದೆ ಇಲ್ಲ ಎನ್ನಲಾಗಿದೆ. ಹಾಗಿದ್ದರೆ ಅವರ ಬದಲು ಪುಟ್ಟರಾಜು ಅವರನ್ನಾದರೂ ಕಣಕ್ಕಿಳಿಸಿ. ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಡಿ ಎಂದು ಕುಮಾರಸ್ವಾಮಿಗೆ ಜೆಡಿಎಸ್ ನಾಯಕರು ಒತ್ತಾಯ ಮಾಡಿದ್ದಾರಂತೆ.

ಸದ್ಯಕ್ಕೆ ಪಕ್ಷದಲ್ಲಿರುವ ಭಿನ್ನಮತ ನಿವಾರಿಸೋಣ. ಮಂಡ್ಯದಿಂದ ಒಮ್ಮತದ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ. ಬಿಜೆಪಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳೋಣ ಎಂದು ಕುಮಾರಸ್ವಾಮಿಯವರು ತಮ್ಮ ಪಕ್ಷದ ಮುಖಂಡರನ್ನು ಸಮಾಧಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments