Webdunia - Bharat's app for daily news and videos

Install App

ಜೆಡಿಎಸ್ ಮುಖಂಡರು ರೋಹಿತ್ ಚಕ್ರತೀರ್ಥನ ಪ್ರತಿಕೃತಿ ದಹನ ಮಾಡಿ ಆಕ್ರೋಶ

Webdunia
ಮಂಗಳವಾರ, 31 ಮೇ 2022 (20:56 IST)
ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೀತಿದೆ. ಇಂದು ಜೆಡಿಎಸ್ ಮುಖಂಡರು ಸೇರಿದಂತೆ ಅನೇಕ ಕಾರ್ಯಕರ್ತರು ಪಠ್ಯ ಪುಸ್ತಕದ ವಿರುದ್ಧ ಕಿಡಿಕಾರಿದ್ದಾರೆ.ಅಷ್ಟೆ ಅಲ್ಲದೆ ಪ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ವಿದ್ಯಾರ್ಥಿ ಸಂಘಟನೆಗಳು, ಪ್ರಗತಿಪರರು, ಸಾಹಿತಿಗಳು ಪ್ರತಿಭಟನೆ ನಡೆಸಿ ಶಿಕ್ಷಣ ಸಚಿವ ನಾಗೇಶ್, ರೋಹಿತ್ ಚಕ್ರತೀರ್ಥ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಪಠ್ಯ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೀತಿದೆ. ನಾಡಗೀತೆಯನ್ನ ಒಳ ಉಡುಪಿಗೆ ಹೋಲಿಸಿ ವಾಟ್ಸ್ ಆಫ್ ಪೋಸ್ಟ್ ಮಾಡಿ ಅಪಮಾನ ಮಾಡಿದ ರೋಹಿತ್ ಚಕ್ರತೀರ್ಥ ವಿರುದ್ದ ಎಲ್ಲೆಡೆ ಭಾರೀ ಅಕ್ರೋಶ ವ್ಯಕ್ತವಾಗ್ತಿದೆ.ಇಂದು ಜೆಡಿಎಸ್ ಪಕ್ಷದ ವತಿಯಿಂದ ಪಠ್ಯ ಪುಸ್ತಕ  ಪರಿಷ್ಕರಣೆ  ಮಾಡಬೇಕೆಂದು ಒತ್ತಾಯಿಸಿ ಜೆಪಿ ಭವನದಲ್ಲಿ  ಸುದ್ದಿಗೋಷ್ಟಿ ನಡೆಸಿದ್ರು. ತದನಂತರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಜೊತೆಗೆ ರೋಹಿತ್ ಚಕ್ರತೀರ್ಥನ ಪ್ರತಿಮೆ ಹಿಡಿದುಕೊಂಡು ಪ್ರತಿಭಟನಾ ಮೆರವಣಿಗೆ ಮಾಡಿದ್ರು. ಅಷ್ಟೆ ಅಲ್ಲದೇ ರೋಹೀತ್ ಚಕ್ರತೀರ್ಥನ್ನ ಪ್ರತಿಮೆಗೆ ಚಪ್ಪಲಿಯಲ್ಲಿ ಹೊಡೆದು , ಪ್ರತಿಕೃತಿ ದಹನ ಮಾಡಿದ್ರು. ಇನ್ನು ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ರು. ಆದ್ರೆ ಇಷ್ಟಕ್ಕೆ ಸುಮ್ಮನಾಗದೇ ನಮ್ಮ ಪ್ರತಿಭಟನೆ ಇಂದಿನಿಂದ ಆರಂಭವಾಗುತ್ತೆ.ಬಂಧಿಸಿರುವ ಮುಖಂಡರನ್ನ ತಕ್ಷಣವೇ ಬಿಡುಗಡೆ ಮಾಡಬೇಕು.‌ರೋಹಿತ್ ಚಕ್ರತೀರ್ಥನ ಪರಿಷ್ಕರಣ ಸಮಿತಿಯಿಂದ ವಜಾಮಾಡಬೇಕು .ಕೂಡಲೇ ಆತನನ್ನ ಬಂಧಿಸಬೇಕು. ಬಿಸಿ ನಾಗೇಶ್ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದ್ರು .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಮುಂದಿನ ಸುದ್ದಿ
Show comments