Select Your Language

Notifications

webdunia
webdunia
webdunia
webdunia

ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ಗಾಗಿ ಜೆಡಿಎಸ್ ನಲ್ಲೇ ಪೈಪೋಟಿ

ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ಗಾಗಿ ಜೆಡಿಎಸ್ ನಲ್ಲೇ ಪೈಪೋಟಿ
ಬೆಂಗಳೂರು , ಮಂಗಳವಾರ, 9 ಅಕ್ಟೋಬರ್ 2018 (09:57 IST)
ಬೆಂಗಳೂರು: ಈ ವರ್ಷ ಅಂತ್ಯ ನಡೆಯಲಿರುವ ಲೋಕಸಭೆ ಚುನಾವಣೆಗೆ ಮೊದಲು ತೆರವಾದ ಸ್ಥಾನಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಟಿಕೆಟ್ ಗಾಗಿ ರಾಜಕೀಯ ಪಕ್ಷದಲ್ಲಿ ಪೈಪೋಟಿ ಶುರುವಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗೆ ಪೈಪೋಟಿ ಹೆಚ್ಚಿದೆ. ಇದು ಜೆಡಿಎಸ್ ನ ಭದ್ರಕೋಟೆಯಾಗಿದ್ದು, ಇಲ್ಲಿ ನಿಂತ ಅಭ್ಯರ್ಥಿಗಳಿಗೆ ಗೆಲುವು ಸುಗಮ ಎನ್ನುವುದು ನಾಯಕರ ಲೆಕ್ಕಾಚಾರ. ಈ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ಸಭೆ ನಡೆಸಲಿದ್ದು, ಅದಾದ ಬಳಿಕ ಮೂರು ದಿನಗಳೊಳಗೆ ಜೆಡಿಎಸ್ ಅಭ್ಯರ್ಥಿಯ ಹೆಸರು ಅಂತಿಮಗೊಳಿಸಲಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ನಲ್ಲೂ ಉಪಚುನಾವಣೆ ಚಟುವಟಿಕೆಗಳು ಗರಿಗೆದರಿದ್ದು, ಇಂದು ಕೈ ನಾಯಕರು ಸಭೆ ಸೇರಿ ಶಿವಮೊಗ್ಗ ಕ್ಷೇತ್ರದ  ಅಭ್ಯರ್ಥಿಯ ಹೆಸರು ಅಂತಿಮಗೊಳಿಸಲಿದ್ದಾರೆ. ಅತ್ತ ಬಿಜೆಪಿಗೂ ಈ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಶಾಸಕ ಚೆಲುವನಾರಾಯಣ ಸ್ವಾಮಿಯನ್ನು ಡೆಡ್ ಹಾರ್ಸ್ ಎಂದು ಟೀಕಿಸಿದವರು ಯಾರು ಗೊತ್ತೇ?