ಚುನಾವಣೆಗೆ JDS ಪ್ರಣಾಳಿಕೆ ಬಿಡುಗಡೆ

Webdunia
ಶನಿವಾರ, 6 ಮೇ 2023 (17:40 IST)
ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು, ಮತದಾನಕ್ಕೆ ಕೇವಲ ನಾಲ್ಕು ದಿನ ಮಾತ್ರ ಬಾಕಿ ಇವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಈಗಾಗಲೇ ತಮ್ಮ ತಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮತದಾರರಿಗೆ ಹಲವು ಭರವಸೆಗಳನ್ನು ನೀಡಿವೆ. ಇದರ ನಡುವೆ ಈಗ ಜೆಡಿಎಸ್ ಒಂದು ಹೆಜ್ಜೆ ಮುಂದಿಟ್ಟು ಬೆಂಗಳೂರಿಗೆ ಪ್ರತ್ಯೇಕ ಜನತಾ ಪ್ರಣಾಳಿಕೆ ಪುಸ್ತಕ ಬಿಡುಗಡೆ ಮಾಡಿದೆ. ಪದ್ಮನಾಭನಗರ ನಿವಾಸದಲ್ಲಿ ರಾಷ್ಟ್ರೀಯ ಅಧ್ಯಕ್ಷ ಹೆಚ್​.ಡಿ ದೇವೆಗೌಡ ಜನತಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.. ಪಡಿತರ ವ್ಯವಸ್ಥೆಯಲ್ಲಿ ಪ್ರತಿ ವ್ಯಕ್ತಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ, ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಭರವಸೆ ನೀಡಲಾಗಿದೆ, ಸ್ವಚ್ಛ ಬೆಂಗಳೂರು ಅಡಿಯಲ್ಲಿ ಜನಸಂದಣಿ ಪ್ರದೇಶಗಳಲ್ಲಿ 100 ಶೌಚಾಲಯ ನಿರ್ಮಾಣದ ಭರವಸೆ ನೀಡಲಾಗಿದೆ.. ಖಾಸಗಿ ಶಾಲಾ ಶಿಕ್ಷಕರಿಗೆ ಸಹಾಯಧನ, ಆಟೋ ಚಾಲಕರಿಗೆ ಸೆಕ್ಯೂರಿಟಿ ಗಾರ್ಡ್​ಗಳಿಗೆ 2 ಸಾವಿರ ರೂ ಸಹಾಯಧನ. ಬೀದಿ ಬದಿ ವ್ಯಾಪಾರಿಗಳಿಗೆ ದುಡಿಮೆ ರೂಪದಲ್ಲಿ ವೇತನ ಪಾವತಿ ಭರವಸೆ ನೀಡಲಾಗಿದೆ.. ಇನ್ನು ಸಾಮಾಜಿಕ ಭದ್ರತೆಗಳು ಮತ್ತು ಆರೋಗ್ಯ ಶ್ರೀರಕ್ಷೆಗೆ ಮಹತ್ವ ಕೊಡಲಾಗಿದೆ.. ಮಹಾನಗರ ಪಾಲಿಕೆ ಆಡಳಿತ ಸುಧಾರಣೆ, ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು, ಬೆಂಗಳೂರು ನಗರಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ ಘೋಷಣೆ ಮಾಡಲಾಗಿದೆ.. ಇನ್ನು ಬಡವರಿಗೆ ಮತ್ತು ಕೈಗಾರಿಕಾ ಕಾರ್ಮಿಕರಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯದ ಭರವಸೆ ನೀಡಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌, ಸುದೀಪ್ ಭಾಗವಹಿಸಿದ್ದ ವಿವಾಹ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ

ಚಿತ್ರದುರ್ಗಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಸಹಕೈದಿಗಳಿಂದ ಬೆದರಿಕೆ

Jabalpur Tragedy: ನಾಲ್ಕು ವರ್ಷದ ಮಗುವಿನ ಮೃತದೇಹ ಪತ್ತೆ ಮೂಲಕ ಶೋಧ ಕಾರ್ಯ ಅಂತ್ಯ

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಕೊಟ್ಟ ಶಾಸಕ ಬಸವರಾಜ ರಾಯರೆಡ್ಡಿ

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮತ ಮರು ಎಣಿಕೆಯಲ್ಲಿ ದೊಡ್ಡ ಪಿತೂರಿ: ಶಿವಕುಮಾರ್ ಕಿಡಿ

ಮುಂದಿನ ಸುದ್ದಿ
Show comments