ಜೆಡಿಎಸ್ ಶಾಸಕ ಗೋಪಾಲಯ್ಯ ನಮ್ಮ ಗಿರಾಕಿನೇ. ಆದ್ರಎ ರಾಜಕೀಯವಾಗಿ ನಮ್ಮಿಂದ ದೂರವಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅಭಿವೃದ್ಧಿ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಜನರ ಅನುಕೂಲಕ್ಕಾಗಿ ಯೋಜನೆ ರೂಪಿಸಲು ಹೋದರೆ ರಾಜಕೀಯ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡಲು ಹೊರಟರೆ ಸಿಎಂ ಮನೆಗೆ 60 ಕೋಟಿ ರೂಪಾಯಿ ಹೋಗಿದೆ ಎಂದು ಆರೋಪಿಸುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿದೆ. ಆದ್ದರಿಂದ, ನಗರವನ್ನು ಗಾರ್ಬೆಜ್ ಸಿಟಿಯಾಗಲು ಬಿಡುವುದಿಲ್ಲ. ನಗರದ ಸ್ವಚ್ಚತೆ ಕಾಪಾಡಲು ಅಗತ್ಯವಾದ ಎಲ್ಲಾ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.