Webdunia - Bharat's app for daily news and videos

Install App

ರಾಜೀನಾಮೆ ಹಿಂಪಡೆದ ಜೆಡಿಎಸ್ ಶಾಸಕ ಪಿಳ್ಳಮುನಿಶಾಮಪ್ಪ

Webdunia
ಶುಕ್ರವಾರ, 24 ಫೆಬ್ರವರಿ 2017 (14:08 IST)
ಜೆಡಿಎಸ್ ಪಕ್ಷಕ್ಕೆ ನಿಸರ್ಗ ನಾರಾಯಣಸ್ವಾಮಿ ಸೇರ್ಪಡೆಯಿಂದ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪಿಳ್ಳಮುನಿಶಾಮಪ್ಪ, ಇದೀಗ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ.
 
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ದೆಹಲಿಯಿಂದ ನೇರವಾಗಿ ಪಿಳ್ಳಶಾಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ಸಂಧಾನ ಸಭೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾದರು.
 
ಇದೇ ವೇಳೆ ದೇವೇಗೌಡರ ಜೊತೆ ಮಾಜಿ ಸಚಿವ ಚನ್ನಿಗಪ್ಪ, ಶಾಸಕರಾದ ನಾರಾಯಣ ಗೌಡ, ಮಾಲೂರು ಮಂಜುನಾಥ್, ರಾಜಣ್ಣ ಮುಂತಾದವರು ಮುನಿಶಾಮಪ್ಪ ನಿವಾಸಕ್ಕೆ ಭೇಟಿ ನೀಡಿದ್ದರು. ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿಯೂ ದೇವೇಗೌಡರು ಖಚಿತ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
 
ಜೆಡಿಎಸ್ ಶಾಸಕರು ಕೂಡಾ ದೇವೇಗೌಡರೊಂದಿಗೆ ಮುನಿಶಾಮಪ್ಪ ಅವರ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದರು. ಮುಂದಿನ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ನೀಡುವುದಾಗಿಯೂ ದೇವೇಗೌಡರು ಖಚಿತ ಭರವಸೆ ನೀಡಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
 
ನಿಸರ್ಗ ನಾರಾಯಣಸ್ವಾಮಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಕ್ಕೆ ಬೇಸರಗೊಂಡು ರಾಜೀನಾಮೆ ನೀಡಿದ್ದೆ ಎಂದು ಜೆಡಿಎಸ್ ಶಾಸಕ ಮುನಿಶಾಮಪ್ಪ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments