Publish Date: Thu, 23 Feb 2017 (13:31 IST)
Updated Date: Thu, 23 Feb 2017 (13:34 IST)
ನಿಸರ್ಗ ನಾರಾಯಣಪ್ಪರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿರುವುದನ್ನು ವಿರೋಧಿಸಿ ಜೆಡಿಎಸ್ ಶಾಸಕ ಪಿಳ್ಳಮುನಿಶಾಮಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನನಗೆ ತಿಳಿಸದೆ ನಾರಾಯಣಪ್ಪರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದು ನೋವು ತಂದಿದೆ. ಆದ್ದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ರಾಜೀನಾಮೆ ಪತ್ರವನ್ನು ಸಭಾಪತಿಯವರಿಗೆ ರವಾನಿಸಿದ್ದು ಕೂಡಲೇ ರಾಜೀನಾಮೆಯನ್ನು ಅಂಗೀಕರಿಸುವಂತೆ ಕೋರಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
ಪಿಳ್ಳಮುನಿಶಾಮಪ್ಪ ತಮ್ಮ ರಾಜಿನಾಮೆ ಪತ್ರವನ್ನ ಸ್ಪೀಕರ್ ಕೋಳಿವಾಡ ಅವರಿಗೆ ನೀಡಿದ್ದು, ಕೂಡಲೇ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ರಾಜಿನಾಮೆ ನಿರ್ಧಾರವನ್ನು ಮರು ಪರಿಶೀಲಿಸುವ ಪ್ರಶ್ನೆಯೇ ಇಲ್ಲ ಕಡ್ಡಿ ತುಂಡು ಮಾಡಿದಂತೆ ಅವರು ಹೇಳಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಪಿಳ್ಳ ಮುನಿಶಾಮಪ್ಪ ಅವರೊಂದಿಗೆ ಚರ್ಚೆ ನಡೆಸುತ್ತಿದ್ದು ಸಮಸ್ಯೆ ಇತ್ಯರ್ಥವಾಗಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.