Select Your Language

Notifications

webdunia
webdunia
webdunia
webdunia

ಬಿಜೆಪಿ, ಕಾಂಗ್ರೆಸ್ ನ ಟಿಕೆಟ್ ವಂಚಿತರಿಗೆ ಜೆಡಿಎಸ್ ಗಾಳ

ಜೆಡಿಎಸ್
ಬೆಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ತನ್ನ ಅಭ್ಯರ್ಥಿಗಳ ಘೋಷಣೆ ಮಾಡುತ್ತಿದ್ದಂತೆ ಕೆಲವು ಟಿಕೆಟ್ ವಂಚಿತ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಆಕಾಂಕ್ಷಿಗಳಿಗೆ ಇದೀಗ ಜೆಡಿಎಸ್ ಗಾಳ ಹಾಕುತ್ತಿದೆ.

ಮೂಡಬಿದಿರೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಿಥುನ್ ರೈಗೆ ಜೆಡಿಎಸ್ ಗಾಳ ಹಾಕಿದೆ ಎನ್ನಲಾಗಿದೆ. ಮಿಥುನ್ ರೈಗೆ ಮೂಡಬಿದಿರೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಜೆಡಿಎಸ್ ಆಮಿಷ ಒಡ್ಡಿದೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

ಆದರೆ ಈ ಬಗ್ಗೆ ಅವರು ಇನ್ನೂ ಏನೂ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ. ಇವರಲ್ಲದೆ, ಹಲವು ಅತೃಪ್ತ ನಾಯಕರನ್ನು ಪಕ್ಷಕ್ಕೆ ಸೆಳೆಯಲು ಜೆಡಿಎಸ್ ತಂತ್ರ ರೂಪಿಸಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪುತ್ರನಿಗಾಗಿ ಬೆವರು ಹರಿಸಲಿರುವ ಸಿಎಂ ಸಿದ್ದರಾಮಯ್ಯ