Select Your Language

Notifications

webdunia
webdunia
webdunia
webdunia

ಜೆಡಿಎಸ್‌ಗೆ ದೋಖಾ ಮಾಡಿದ್ದನ್ನು ಸಿಎಂ ಸಿದ್ದರಾಮಯ್ಯ ನೆನಪಿಸಿಕೊಳ್ಳಲಿ: ಕುಮಾರಸ್ವಾಮಿ

ಜೆಡಿಎಸ್‌ಗೆ ದೋಖಾ ಮಾಡಿದ್ದನ್ನು ಸಿಎಂ ಸಿದ್ದರಾಮಯ್ಯ ನೆನಪಿಸಿಕೊಳ್ಳಲಿ: ಕುಮಾರಸ್ವಾಮಿ
ಹಾಸನ , ಸೋಮವಾರ, 24 ಅಕ್ಟೋಬರ್ 2016 (11:59 IST)
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕುರಿತು ಟೀಕಿಸುವ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ ಎಂದು ಜೆಡಿಎಸ್ ಪಕ್ಷಕ್ಕೆ ದೋಖಾ ಮಾಡಿದ್ದನ್ನು ನೆನಪಿಸಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
 
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತ ಪರ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತ ಸಮುದಾಯದ ಅಭಿವೃದ್ಧಿಗೆ ಏಷ್ಟು ಖರ್ಚು ಮಾಡಿದ್ದಾರೆ ಸಾರ್ವಜನಿಕವಾಗಿ ಬಹಿರಂಗ ಪಡಿಸಲಿ ಎಂದು ಹೇಳಿದರು.
 
ಬರಗಾಲ ಪರಿಸ್ಥಿತಿಯಿಂದ ರಾಜ್ಯ ತೀರ್ವ ಸಂಕಷ್ಟ ಅನುಭವಿಸುತ್ತಿದ್ದರು ನಿಗಮ ಮಂಡಳಿ ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ಒದಾಡುತ್ತಿದ್ದಾರೆ. ಇಂತ ಸಮಯದಲ್ಲಿ ನಿಗಮ ಮಂಡಳಿ ನೇಮಕಾತಿ ಬೇಕಾ ಎಂದು ಪ್ರಶ್ನಿಸಿದರು. 
 
ಬರ ಪರಿಸ್ಥಿತಿಯಿಂದ ಒದ್ದಾಡುತ್ತಿರುವ ರೈತರು ಕಾಂಗ್ರೆಸ್ ಸರಕಾರದ ಮೇಲೆ ಸಂಪೂರ್ಣ ವಿಶ್ವಾಸ ಕಳೆದುಕೊಂಡಿರುವಾಗ ಮತ್ತೆ ನಿಮಗೆ ಅಧಿಕಾರ ಸಿಗುವುದು ಗಗನಕುಸುಮ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

Share this Story:

Follow Webdunia kannada

ಮುಂದಿನ ಸುದ್ದಿ

ಸುಪ್ರೀಂಕೋರ್ಟ್‌ನಲ್ಲಿ ಇಂದು ಕಾವೇರಿ ಅರ್ಜಿ ವಿಚಾರಣೆ