Publish Date: Sat, 24 Mar 2018 (10:03 IST)
Updated Date: Sat, 24 Mar 2018 (10:05 IST)
ಬೆಂಗಳೂರು: ಚೆಲುವರಾಯ ಸ್ವಾಮಿ, ಜಮೀರ್ ಅಹಮ್ಮದ್ ಮತ್ತಿತರ ಶಾಸಕರು ಜೆಡಿಎಸ್ ನಿಂದ ಬಂಡಾಯವೆದ್ದು, ಆ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದು ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಇಂದು ಮಧ್ಯಾಹ್ನ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಜಮೀರ್ ಅಹಮ್ಮದ್ ಆಂಡ್ ಟೀಂ ಬಳಿಕ ಸದ್ಯಕ್ಕೆ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲೇ ಕಾಂಗ್ರೆಸ್ ಗೆ ಸೇರ್ಪಡೆಯಲಾಗಲಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಇಂದು ಮಧ್ಯಾಹ್ನ ರೆಬಲ್ ಶಾಸಕರು ರಾಜೀನಾಮೆ ಸಲ್ಲಿಸಲಿದ್ದಾರೆ. ನಿನ್ನೆ ನಡೆದ ರಾಜ್ಯ ಸಭೆಚುನಾವಣೆಯಲ್ಲೂ ಈ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ