Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಸೋಲಿಸಲು ಜೆಡಿಎಸ್ ರಣತಂತ್ರ

ಸಿಎಂ ಸಿದ್ದರಾಮಯ್ಯ ಸೋಲಿಸಲು ಜೆಡಿಎಸ್ ರಣತಂತ್ರ
ಮೈಸೂರು , ಶನಿವಾರ, 7 ಅಕ್ಟೋಬರ್ 2017 (16:20 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಹಿನ್ನೆಲೆಯಲ್ಲಿ, ಸಿದ್ದರಾಮಯ್ಯರನ್ನು ಸೋಲಿಸಲು ಜೆಡಿಎಸ್ ರಣತಂತ್ರ ರೂಪಿಸಲು ಸಿದ್ದತೆ ನಡೆಸಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದರೆ, ಅವರ ಪ್ರಬಲ ಎದುರಾಳಿಯಾಗಿ ಜೆಡಿಎಸ್ ಪಕ್ಷದ ಜಿ.ಟಿ.ದೇವೇಗೌಡ ಕಣಕ್ಕಿಳಿಯಲಿದ್ದಾರೆ.
 
ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಸಂಸದ ಎಚ್.ವಿಶ್ವನಾಥ್, ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ತೆರಳಿ ಸಿಎಂ ಸಿದ್ದರಾಮಯ್ಯರನ್ನು ಸೋಲಿಸುವ ಬಗ್ಗೆ ರಣತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.
 
ಮುಂಬರುವ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ ರೀತಿ ಪ್ರಚಾರ ಕೈಗೊಳ್ಳಬೇಕು ಎನ್ನುವ ಬಗ್ಗೆ ದೇವೇಗೌಡರು, ಜೆಡಿಸ್ ನಾಯಕರೊಂದಿಗೆ ಚರ್ಚೆ ನಡೆಸಿದರು ಎಂದು ಜೆಡಿಎಸ್ ಮುಖಂಡರು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

14 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿ ಹೋದ 28 ವರ್ಷದ ಶಿಕ್ಷಕಿ