Webdunia - Bharat's app for daily news and videos

Install App

ಜೆಡಿಎಸ್ ವರಿಷ್ಠರಿಗೆ ನಾಯಕರನ್ನು ಸೃಷ್ಟಿಸುವ ತಾಕತ್ತಿದೆ: ಜೆಡಿಎಸ್ ಶಾಸಕ

Webdunia
ಶುಕ್ರವಾರ, 17 ಜೂನ್ 2016 (19:52 IST)
ಜೆಡಿಎಸ್ ಪಕ್ಷದ ವರಿಷ್ಠರಿಗೆ ನಾಯಕರನ್ನು ಸೃಷ್ಟಿಸುವ ತಾಕತ್ತಿದೆ.ಎಷ್ಟೇ ಶಾಸಕರು ಜೆಡಿಎಸ್ ತೊರೆದರೂ ವರಿಷ್ಠರು ಹೆದರೊಲ್ಲ ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹೇಳಿದ್ದಾರೆ.
 
ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐವರು ಪ್ರಭಾವಿ ಸಚಿವರಿದ್ದರೂ ಜೆಡಿಎಸ್ ಅಭ್ಯರ್ಥಿ ಶ್ರೀಕಂಠೇಗೌಡ ಜಯಗಳಿಸಿದ್ದಾರೆ. ಜೆಡಿಎಸ್ ಜನರ ಪಕ್ಷ ಎನ್ನುವುದಕ್ಕೆ ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶವೇ ಸಾಕ್ಷಿಯಾಗಿದೆ ಎಂದರು.
 
ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಭಿನ್ನಮತ ನಡೆಸುವ ಶಾಸಕರಿಗೂ ಫಲಿತಾಂಶ ತಕ್ಕ ಉತ್ತರವಾಗಿದೆ. ಜೆಡಿಎಸ್ ವರಿಷ್ಠರಿಗೆ ನೂರಾರು ಶಾಸಕರನ್ನು ಗೆಲ್ಲಿಸುವ ಸಾಮರ್ಥವಿದೆ. ಯಾರೇ ಜೆಡಿಎಸ್ ತೊರೆದರೂ ಪಕ್ಷದ ನಾಯಕರು ಹೆದರೋಲ್ಲ ಎಂದು ಭಿನ್ನಮತೀಯ ಶಾಸಕರಿಗೆ ತಿರುಗೇಟು ನೀಡಿದ್ದಾರೆ.
 
 ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್‌ನಿಂದ ಅಮಾನತ್ತುಗೊಂಡ ಶಾಸಕ ಚಲುವರಾಯ ಸ್ವಾಮಿ ಸೇರಿದಂತೆ ಇತರ ಏಳು ಮಂದಿ ಶಾಸಕರು ಜೆಡಿಎಸ್ ಅಭ್ಯರ್ಥಿಗೆ ಮತಹಾಕದಂತೆ ಕರೆ ನೀಡಿದ್ದರು. ಆದರೆ, ಅವರ ಕರೆಗೆ ಮೂರು ಕಾಸಿನ ಬೆಲೆ ನೀಡದ ಮತದಾರರು ಜೆಡಿಎಸ್ ಅಭ್ಯರ್ಥಿ ಶ್ರೀಕಂಠೇಗೌಡರನ್ನು ಗೆಲ್ಲಿಸಿದ್ದಾರೆ ಎಂದು ಬಂಡಾಯ ಶಾಸಕರ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ವ್ಯಂಗ್ಯವಾಡಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments