Select Your Language

Notifications

webdunia
webdunia
webdunia
webdunia

ಯಡಿಯೂರಪ್ಪರ ಹುಟ್ಟೂರಲ್ಲಿ ಭಾರೀ ಶಪಥ ಮಾಡಿದ ಜೆಡಿಎಸ್

ಯಡಿಯೂರಪ್ಪರ ಹುಟ್ಟೂರಲ್ಲಿ ಭಾರೀ ಶಪಥ ಮಾಡಿದ ಜೆಡಿಎಸ್
ಮಂಡ್ಯ , ಬುಧವಾರ, 30 ಅಕ್ಟೋಬರ್ 2019 (18:55 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಹುಟ್ಟೂರಾದ ಬೂಕನಕೆರೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಯಿತು.

ಮಂಡ್ಯದ ಬೂಕನಕೆರೆ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸಾಲಮನ್ನಾ ಅರಿವು ಸಭೆಯು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.
webdunia

ಡಿ.ರಮೇಶ್ ಮಾತನಾಡಿ, ಜೆಡಿಎಸ್ ಪಕ್ಷಕ್ಕೆ ಮೋಸಮಾಡಿ, ಕುಮಾರಸ್ವಾಮಿ ಅವರ ನೇತೃತ್ವದ ಮೈತ್ರಿ ಸರ್ಕಾರವನ್ನು ಪದಚ್ಯುತಗೊಳಿಸಿದ್ದಾರೆ ಅನರ್ಹ ಶಾಸಕ ನಾರಾಯಣಗೌಡ. ಹಣದಾಸೆಗೆ ತಮ್ಮನ್ನು ಬಿಜೆಪಿ ಪಕ್ಷಕ್ಕೆ ನಾರಾಯಣಗೌಡ  ಮಾರಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ದೂರಿದ್ರು.

ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಬಾಡೂಟದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ. ಆ ಮೂಲಕ
ಹಣವನ್ನು ನೀರಿನಂತೆ ಚೆಲ್ಲಿ ರಾಜಕೀಯ ವ್ಯಭಿಚಾರ ನಡೆಸುತ್ತಿದ್ದಾರೆ ಎಂದು ರಮೇಶ್ ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಅಭ್ಯರ್ಥಿಯನ್ನು ಉಪ ಚುನಾವಣೆಯಲ್ಲಿ ಗೆಲ್ಲಿಸಬೇಕೆಂದು ಕೋರಿದರು.




Share this Story:

Follow Webdunia kannada

ಮುಂದಿನ ಸುದ್ದಿ

ದೇವರ ಜೊತೆಗೆ ಕೆಂಡಕ್ಕೆ ಬಿದ್ದ ಭಕ್ತರು - ಶಾಕಿಂಗ್