Select Your Language

Notifications

webdunia
webdunia
webdunia
webdunia

ಮುಂದಿನ ಸಿಎಂ ನಾನೇ ಎನ್ನುವ ಹೇಳಿಕೆಗೆ ಜಾಫರ್‌ಷರೀಫ್ ಆಕ್ಷೇಪ

ಮುಂದಿನ ಸಿಎಂ ನಾನೇ ಎನ್ನುವ ಹೇಳಿಕೆಗೆ ಜಾಫರ್‌ಷರೀಫ್ ಆಕ್ಷೇಪ
ಬೆಂಗಳೂರು , ಗುರುವಾರ, 28 ಸೆಪ್ಟಂಬರ್ 2017 (15:36 IST)
ಮುಂದಿನ ಸಿಎಂ ನಾನೇ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹಿರಿಯ ಕಾಂಗ್ರೆಸ್ ಮುಖಂಡ ಜಾಫರ್‌ಷರೀಫ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಜಯಭೇರಿ ಬಾರಿ ಅಧಿಕಾರಕ್ಕೆ ಬರುತ್ತದೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮತ್ತೆ ನಾನೇ ಸಿಎಂ ಆಗುತ್ತೇನೆ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯಗೆ ಹಿರಿಯ ಕಾಂಗ್ರೆಸ್ ನಾಯಕ ಜಾಫರ್ ಷರೀಫ್ ಬುದ್ದಿ ಮಾತು ಹೇಳಿದ್ದಾರೆ.
 
ನಾನೇ ಎನ್ನುವ ಅಹಂ ಒಳ್ಳೆಯದಲ್ಲ. ಪಕ್ಷ ಮೊದಲು ಎನ್ನುವುದನ್ನು ನೆನಪಿಟ್ಟುಕೊಳ್ಳಿ. ಅಹಂಕಾರದ ಮಾತುಗಳು ಯಾರಿಗೂ ಶೋಭೆ ತರುವುದಿಲ್ಲ ಎಂದು ಟಾಂಗ್ ನೀಡಿದ್ದಾರೆ.  
 
ಕಾಂಗ್ರೆಸ್ ಪಕ್ಷ ಮೊದಲು ಅಧಿಕಾರಕ್ಕೆ ಬರಲಿ. ಯಾರು ಮುಖ್ಯಮಂತ್ರಿಯಾಗಬೇಕು ಎನ್ನುವ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಆತುರಾತುರವಾಗಿ ನಾನೇ ಮುಂದಿನ ಸಿಎಂ ಎನ್ನುವ ಹೇಳಿಕೆ ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ಚುನಾವಣೆ ಬಳಿಕ ನಮ್ಮದೇ ಸರಕಾರ: ಸಿಎಂ