Select Your Language

Notifications

webdunia
webdunia
webdunia
webdunia

ಮಾಜಿ ಸಿಎಂ ಧರ್ಮಸಿಂಗ್ ಪುತ್ರ ಡಾ. ಅಜಯ್ ಸಿಂಗ್ ವಿರುದ್ಧ ಕೊಲೆಗೆ ಸುಪಾರಿ ಆರೋಪ

ಮಾಜಿ ಸಿಎಂ ಧರ್ಮಸಿಂಗ್ ಪುತ್ರ ಡಾ. ಅಜಯ್ ಸಿಂಗ್ ವಿರುದ್ಧ ಕೊಲೆಗೆ ಸುಪಾರಿ ಆರೋಪ
ಕಲಬುರಗಿ , ಶುಕ್ರವಾರ, 2 ಸೆಪ್ಟಂಬರ್ 2016 (20:10 IST)
ಜಿಲ್ಲೆಯ ಜೇವರ್ಗಿ ತಾಲೂಕಿನ ನಿವಾಸಿಯಾದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತ 30 ವರ್ಷ ವಯಸ್ಸಿನ ಗಣಪತಿ ಕೋಬಾಳ್ಕರ್ ಶಾಸಕ ಡಾ. ಅಜಯ್ ಸಿಂಗ್ ನನ್ನ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
 
ನನ್ನ ಸಾವಿಗೆ ಜೇವರ್ಗಿ ಶಾಸಕ ಅಜಯ್ ಸಿಂಗ್ ಕಾರಣರಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನನ್ನನ್ನು ಅಪಹರಿಸಲಾಗಿತ್ತು. ಅಪಹರಣಕಾರರಿಂದ ತಪ್ಪಿಸಿಕೊಂಡು ಶಹಾಪುರಕ್ಕೆ ಬಂದಿದ್ದೆ. ನನ್ನ ಮತ್ತು ಅವರ ವಿರುದ್ಧದ ದ್ವೇಷಕ್ಕೆ ರಾಜಕೀಯವೇ ಕಾರಣವಾಗಿದೆ. ಅವರು ನನ್ನ ಮೇಲೆ ಧ್ವೇಷ ಸಾಧಿಸುತ್ತಿದ್ದರು ಎಂದು ಆರೋಪಿಸಿದ್ದಾರೆ.
 
ಸಿದ್ದಲಿಂಗೇಶ್ವರ್ ಬೆಟ್ಟದಲ್ಲಿರುವ ಮರವೊಂದಕ್ಕೆ ಗೋಪಾಳ ಕೋಬಾಳಕರ್ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆಪ್ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದ್ದ ತನಿಖೆಗೆ ಮೊದಲು ಏನನ್ನು ಹೇಳಲು ಸಾಧ್ಯವಿಲ್ಲ. ತನಿಖೆಯ ನಂತರ ಡೆತ್ ನೋಟ್ ನಿಜವೋ ಸುಳ್ಳೋ ಎನ್ನುವ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಯಾದಗಿರಿ ಎಸ್‌ಪಿ ವಿನಾಯಕ್ ಪಾಟೀಲ್ ತಿಳಿಸಿದ್ದಾರೆ. 
  
ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಸಮನ್ಸ್‌ ಕಡೆಗಣಿಸಿದ ಕಾರ್ತಿ ಕಸ್ಟಡಿಗೆ: ಇಡಿ ಪರಿಶೀಲನೆ