Webdunia - Bharat's app for daily news and videos

Install App

ಮಾಜಿ ಸಿಎಂ ಧರ್ಮಸಿಂಗ್ ಪುತ್ರ ಡಾ. ಅಜಯ್ ಸಿಂಗ್ ವಿರುದ್ಧ ಕೊಲೆಗೆ ಸುಪಾರಿ ಆರೋಪ

Webdunia
ಶುಕ್ರವಾರ, 2 ಸೆಪ್ಟಂಬರ್ 2016 (20:10 IST)
ಜಿಲ್ಲೆಯ ಜೇವರ್ಗಿ ತಾಲೂಕಿನ ನಿವಾಸಿಯಾದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತ 30 ವರ್ಷ ವಯಸ್ಸಿನ ಗಣಪತಿ ಕೋಬಾಳ್ಕರ್ ಶಾಸಕ ಡಾ. ಅಜಯ್ ಸಿಂಗ್ ನನ್ನ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
 
ನನ್ನ ಸಾವಿಗೆ ಜೇವರ್ಗಿ ಶಾಸಕ ಅಜಯ್ ಸಿಂಗ್ ಕಾರಣರಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನನ್ನನ್ನು ಅಪಹರಿಸಲಾಗಿತ್ತು. ಅಪಹರಣಕಾರರಿಂದ ತಪ್ಪಿಸಿಕೊಂಡು ಶಹಾಪುರಕ್ಕೆ ಬಂದಿದ್ದೆ. ನನ್ನ ಮತ್ತು ಅವರ ವಿರುದ್ಧದ ದ್ವೇಷಕ್ಕೆ ರಾಜಕೀಯವೇ ಕಾರಣವಾಗಿದೆ. ಅವರು ನನ್ನ ಮೇಲೆ ಧ್ವೇಷ ಸಾಧಿಸುತ್ತಿದ್ದರು ಎಂದು ಆರೋಪಿಸಿದ್ದಾರೆ.
 
ಸಿದ್ದಲಿಂಗೇಶ್ವರ್ ಬೆಟ್ಟದಲ್ಲಿರುವ ಮರವೊಂದಕ್ಕೆ ಗೋಪಾಳ ಕೋಬಾಳಕರ್ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆಪ್ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದ್ದ ತನಿಖೆಗೆ ಮೊದಲು ಏನನ್ನು ಹೇಳಲು ಸಾಧ್ಯವಿಲ್ಲ. ತನಿಖೆಯ ನಂತರ ಡೆತ್ ನೋಟ್ ನಿಜವೋ ಸುಳ್ಳೋ ಎನ್ನುವ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಯಾದಗಿರಿ ಎಸ್‌ಪಿ ವಿನಾಯಕ್ ಪಾಟೀಲ್ ತಿಳಿಸಿದ್ದಾರೆ. 
  
ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments