Select Your Language

Notifications

webdunia
webdunia
webdunia
webdunia

ಕೇರಳ ರೈಲಿಗೆ ಬೆಂಕಿ ಹಚ್ಚಿದ ಜಿಹಾದಿ ಆರೋಪಿ ಬಂಧನ

ಕೇರಳ ರೈಲಿಗೆ ಬೆಂಕಿ ಹಚ್ಚಿದ ಜಿಹಾದಿ ಆರೋಪಿ ಬಂಧನ
ಕೇರಳ , ಸೋಮವಾರ, 2 ಅಕ್ಟೋಬರ್ 2023 (17:48 IST)
ಕೇರಳದ ರೈಲಿಗೆ ಬೆಂಕಿ ಹಚ್ಚಿದ ಘಟನೆಯು ಜಿಹಾದಿ ಭಯೋತ್ಪಾದಕ ಕೃತ್ಯವಾಗಿದೆ ಎಂದು NIA ಹೇಳಿಕೆಯಲ್ಲಿ ತಿಳಿಸಿದೆ. ಈ ಪ್ರಕರಣದ ಏಕೈಕ ಆರೋಪಿ, ಸ್ವಯಂ ಉಗ್ರಗಾಮಿ ಶಾಹೀನ್ ಬಾಗ್ ನಿವಾಸಿಯಾಗಿದ್ದಾನೆ. ಈತ ಜನರನ್ನು ಕೊಲ್ಲುವ ಉದ್ದೇಶದಿಂದ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್‌ನ ಬೋಗಿಗೆ ಬೆಂಕಿ ಹಚ್ಚಿದ್ದಾನೆ ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ತಿಳಿಸಿದೆ.ರೈಲಿನಲ್ಲಿ  ಮಗು ಸೇರಿದಂತೆ ಮೂವರು ಪ್ರಯಾಣಿಕರು ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದರು. ಈ ಸಂಬಂಧ ಆರೋಪಿ ಶಾರುಖ್ ಅಲಿಯಾಸ್ ಶಾರುಖ್ ಸೈಫಿ  ವಿರುದ್ಧ ಐಪಿಸಿ, ಯುಎ (ಪಿ) ಎ ಆಕ್ಟ್, ರೈಲ್ವೇಸ್ ಆಕ್ಟ್ ಮತ್ತು ಪಿಡಿಪಿಪಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ-ಬೊಮ್ಮಾಯಿ