Publish Date: Sat, 30 Dec 2023 (10:05 IST)
Updated Date: Sat, 30 Dec 2023 (10:10 IST)
ಬೆಂಗಳೂರು: ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಸರ್ಕಾರದ ವತಿಯಿಂದಲೇ ಉದ್ಯೋಗ ಮೇಳ ಆಯೋಜಿಸಲು ಮುಂದಾಗಿದೆ.
ಚುನಾವಣೆ ವೇಳೆ ನೀಡಿದ್ದ ಭರವಸೆಯಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ ಉದ್ಯೋಗ ಮೇಳ ನಡೆಸಲು ತೀರ್ಮಾನಿಸಿದೆ. ಯುವ ಜನರನ್ನು ಸೆಳೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಮುಂದಾಗಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಇನ್ನು, ಈ ಉದ್ಯೋಗ ಮೇಳ ನಡೆಯುವುದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ. ಜನವರಿ ಕೊನೆಯ ವಾರದಲ್ಲಿ ಉದ್ಯೋಗ ಮೇಳ ಆಯೋಜಿಸಲು ಸರ್ಕಾರ ಚಿಂತನೆ ನಡೆಸಿದೆ.
ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲು 6 ಸಚಿವರನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಖಾಸಗಿ ಮತ್ತು ಸರ್ಕಾರಿ ವಲಯದಲ್ಲಿ ಉದ್ಯೋಗ ಖಾಲಿಯಿರುವ ಕಡೆಗೆ ಭರ್ತಿಗೆ ಈ ಉದ್ಯೋಗ ಮೇಳ ಸಹಾಯವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.