Jog Falls: ಇನ್ನು ಕೆಲವು ದಿನಗಳಿಗೆ ಜೋಗ ಜಲಪಾತಕ್ಕೆ ಭೇಟಿ ನೀಡುವುದು ವೇಸ್ಟ್

Krishnaveni K
ಸೋಮವಾರ, 10 ಫೆಬ್ರವರಿ 2025 (11:24 IST)
ಶಿವಮೊಗ್ಗ: ಜೀವನದಲ್ಲಿ ಒಮ್ಮೆಯಾದರೂ ಜೋಗದ ಗುಂಡಿ ನೋಡಬೇಕು ಎಂದು ಅಣ್ಣಾವ್ರು ಹಾಡಿದ್ದಾರೆ. ಆದರೆ ಜೋಗ ಜಲಪಾತಕ್ಕೆ ಇನ್ನು ಕೆಲವು ದಿನಗಳಿಗೆ ಭೇಟಿ ಕೊಡುವುದು ವೇಸ್ಟ್ ಎನ್ನಬಹುದು. ಅದಕ್ಕೆ ಕಾರಣ ಇಲ್ಲಿದೆ.
 

ವಿಶ್ವ ವಿಖ್ಯಾತ ಜೋಗ ಜಲಪಾತ ಕರ್ನಾಟಕ ಆಕರ್ಷಣೀಯ ಪ್ರವಾಸೀ ತಾಣಗಳಲ್ಲಿ ಒಂದಾಗಿದೆ. ಶಿವಮೊಗ್ಗ, ಸಾಗರ ಕಡೆಗೆ ಹೋದರೆ ಜೋಗ ಜಲಪಾತಕ್ಕೆ ಭೇಟಿ ಕೊಟ್ಟೇ ಕೊಡುತ್ತಾರೆ. ನಿತ್ಯವೂ ಇಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿರುತ್ತದೆ.

ಆದರೆ ಇದೀಗ ಜೋಗ ಜಲಪಾತಕ್ಕೆ ಹೋಗುವುದೇ ಟೈಂ, ದುಡ್ಡು ಎಲ್ಲವೂ ವೇಸ್ಟ್ ಎನ್ನುತ್ತಿದ್ದಾರೆ ಸಾರ್ವಜನಿಕರು. ಇದಕ್ಕೆ ಕಾರಣವೂ ಇದೆ. ಸದ್ಯಕ್ಕೆ ಜೋಗ ಜಲಪಾತವನ್ನು ಹತ್ತಿರದಿಂದ ವೀಕ್ಷಣೆ ಮಾಡಲು ಅವಕಾಶವಿಲ್ಲ. ಕಾಮಗಾರಿ ಪ್ರಗತಿಯಲ್ಲಿರುವುದರಿಂದ ದೂರ ರಸ್ತೆಯಿಂದಲೇ ವೀಕ್ಷಣೆ ಮಾಡಲು ಅವಕಾಶ ನೀಡಲಾಗಿದೆ.

ಮೊದಲೇ ಜಲಪಾತದಲ್ಲಿ ನೀರಿಲ್ಲ. ಅದರ ಮೇಲೆ ಮೈಲಿ ದೂರದಿಂದ ಜಲಪಾತ ವೀಕ್ಷಿಸಿದರೆ ಅದರ ಖುಷಿಯೇ ಸಿಗದು. ಇನ್ನು, ನಿಮಗೆ ತೀರಾ ಹತ್ತಿರದಿಂದ ನೋಡಬೇಕು ಎಂದರೆ ಅಲ್ಲಿಯೇ ಇರುವ ಖಾಸಗಿ ಗೈಡ್ ಗಳು ಆಟೋ ಮೂಲಕ ಮುಂಗಾರು ಮಳೆ ಪಾಯಿಂಟ್ ತನಕ ಕರೆದುಕೊಂಡು ಹೋಗುತ್ತಾರೆ. ಆದರೆ ಈ ರೀತಿ ಕರೆದೊಯ್ಯಲು ತಲಾ ಒಬ್ಬರಿ 150 ರೂ.ವರೆಗೆ ಚಾರ್ಜ್ ಮಾಡಲಾಗುತ್ತದೆ. ಅಷ್ಟೊಂದು ದುಡ್ಡು ಕೊಟ್ಟು ಹೋದರೂ ನೋಡುವಷ್ಟು ನೀರಿಲ್ಲ. ಹೀಗಾಗಿ ಟೈಂ, ದುಡ್ಡು ಎರಡೂ ವೇಸ್ಟ್ ಎನ್ನುತ್ತಿದ್ದಾರೆ ಜನ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments