Webdunia - Bharat's app for daily news and videos

Install App

ಅಪಾರ್ಟ್‍ಮೆಂಟ್‍ನಲ್ಲಿ ಮನೆ ಕೆಲಸಕ್ಕೆಂದು ಸೇರಿಕೊಂಡು ಅದೇ ಮನೆಗಳಲ್ಲಿ ಚಿನ್ನಾಭರಣ ಕಳವು

Webdunia
ಶುಕ್ರವಾರ, 13 ಆಗಸ್ಟ್ 2021 (20:46 IST)
ಅಪಾರ್ಟ್‍ಮೆಂಟ್‍ನಲ್ಲಿ ಮನೆ ಕೆಲಸಕ್ಕೆಂದು ಸೇರಿಕೊಂಡು ಅದೇ ಮನೆಗಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಮಹಿಳೆಯೊಬ್ಬಳನ್ನು ಆರ್.ಎಂ.ಸಿ. ಯಾರ್ಡ್ ಠಾಣೆ ಪೆÇಲೀಸರು ಬಂಧಿಸಿದ್ದಾರೆ. 
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕೃಷ್ಣಂ ಪಲ್ಲಿ ನಿವಾಸಿ ಪುಷ್ಪ ಬಂಧಿತ ಮಹಿಳೆ. ಆರೋಪಿಯಿಂದ 18 ಲಕ್ಷ ರೂ. ಮೌಲ್ಯದ 378 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಆರೋಪಿಯು, ಆಂಧ್ರಪ್ರದೇಶದಿಂದ ನಗರಕ್ಕೆ ಬಂದು ಅಪಾರ್ಟ್‍ಮೆಂಟ್‍ಗಳಲ್ಲಿ ಮನೆ ಕೆಲಸ ಮಾಡುತ್ತಿದ್ದಳು. ಮನೆ ಮಾಲೀಕರು ಚಿನ್ನಾಭರಣ ಇಡುತ್ತಿದ್ದನ್ನು ಗಮನಿಸುತ್ತಿದ್ದಳು. ಮಾಲೀಕರು ಮನೆಯಿಂದ ಹೊರಹೋದ ಸಂದರ್ಭದಲ್ಲಿ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದಳು. 
ನಗರದ ಯಶವಂತಪುರದ ಗೋಲ್ಡನ್ ಗ್ರ್ಯಾಂಡ್ ಅಪಾರ್ಟ್‍ಮೆಂಟ್‍ನ ಮನೆಯೊಂದರಲ್ಲಿ ಜೂನ್ 1ರಿಂದ ಮನೆ ಕೆಲಸಕ್ಕೆ ಸೇರಿಕೊಂಡಿದ್ದ ಈಕೆ, ಚಿನ್ನಾಭರಣಗಳನ್ನು ಕಳವು ಮಾಡಿದ್ದಳು. ಇದೇ ವೇಳೆ ಮನೆ ಮಾಲೀಕರು ತಮ್ಮ ಚಿನ್ನಾಭರಣಗಳನ್ನು ಬ್ಯಾಂಕ್ ಲಾಕರ್‍ನಲ್ಲಿಡಲು ನೋಡಿದಾಗ ಕಳವಾಗಿರುವುದು ತಿಳಿದಿದೆ. ಕೂಡಲೇ ಈ ಸಂಬಂಧ ಆರ್.ಎಂ.ಸಿ. ಯಾರ್ಡ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಕೈಗೊಂಡ ಪೆÇಲೀಸರು ಮನೆ ಕೆಲಸದಾಕೆ ಮೇಲೆ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಆಕೆಯ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಮನೆ ಕೆಲಸದಿಂದ ದೊರೆಯುವ ಕೂಲಿ, ಮನೆ ನಿರ್ವಹಣೆಗೆ ಸಾಕಾಗುತ್ತಿರಲಿಲ್ಲ. ಹೀಗಾಗಿ, ಕಳವು ಮಾಡಿರುವುದಾಗಿ ತಿಳಿಸಿದ್ದಾಳೆ ಎಂದು ಪೆÇಲೀಸರು ತಿಳಿಸಿದರು. 
ಸದ್ಯ ಆರೋಪಿ ಬಂಧಿಸಿ, ಆಕೆಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments