Select Your Language

Notifications

webdunia
webdunia
webdunia
webdunia

ವರದಿಗಾರ್ತಿಗೆ ನಿಂದನೆ: ಖೇಣಿ ಕ್ಷಮೆಯಾಚಿಸಲಿ ಎಂದ ಬಿಜೆಪಿ ನಾಯಕಿ

ವರದಿಗಾರ್ತಿಗೆ ನಿಂದನೆ: ಖೇಣಿ ಕ್ಷಮೆಯಾಚಿಸಲಿ ಎಂದ ಬಿಜೆಪಿ ನಾಯಕಿ
ಬೆಂಗಳೂರು , ಮಂಗಳವಾರ, 7 ಜೂನ್ 2016 (18:40 IST)
ನಿನ್ನೆ ಮುಂಬೈನಲ್ಲಿ ಖಾಸಗಿ ವಾಹಿನಿ ವರದಿಗಾರ್ತಿಯ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಕನ್ನಡ ಮಕ್ಕಳ ಪಕ್ಷದ ಶಾಸಕ ಅಶೋಕ್ ಖೇಣಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ ಒತ್ತಾಯಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ, ಸಾರ್ವಜನಿಕ ಸೇವೆಯಲ್ಲಿರುವ ರಾಜಕಾರಣಿಗಳು ವರದಿಗಾರ್ತಿಯನ್ನು ಕೆಟ್ಟ ಶಬ್ದಗಳಿಂದ ನಿಂದಿಸಿರುವುದು ಮಹಿಳಾ ಸಮಾಜಕ್ಕೆ ಅವಮಾನ ಮಾಡಿದಂತಾಗಿದೆ. ಶಾಸಕ ಅಶೋಕ್ ಖೇಣಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
 
ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ ಶೆಣೈ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿರುವ ತಾರಾ, ಅವರ ರಾಜೀನಾಮೆ ಹಿಂದಿರುವ ಸತ್ಯಾಂಶವನ್ನು ಬಹಿರಂಗಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪರೀಕ್ಷಾ ಕೇಂದ್ರಗಳಿಗೆ ಆನ್ ಲೈನ್ ಮೂಲಕ ಪ್ರಶ್ನೆ ಪತ್ರಿಕೆ ರವಾನೆ: ಜಯಚಂದ್ರ