ಸಿಎಂ ಕ್ರಮಕ್ಕೆ ಪತ್ರಕರ್ತರ ಸಂಘ ಖಂಡನೆ

Webdunia
ಬುಧವಾರ, 29 ಮೇ 2019 (15:11 IST)
ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಅವರ ಮೇಲೆ  ಪೊಲೀಸ್ ದೂರು ದಾಖಲಿಸಿರುವುದು ಸರಿಯಾದ ಕ್ರಮವಲ್ಲ ಮತ್ತು ಖಂಡನೀಯ ಎಂದು ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘ ತಿಳಿಸಿದೆ.

ಪತ್ರಿಕೆಯಲ್ಲಿ ಬಂದಿರುವ ಸುದ್ದಿ ಉದ್ದೇಶಪೂರಿತವಾಗಿದ್ದರೆ, ಸುಳ್ಳು ಮಾಹಿತಿಯಾಗಿದ್ದರೆ ಸ್ಪಷ್ಟನೆ, ವಿವರಣೆ ಕೊಡುವುದು ಕ್ರಮಬದ್ದವಾದದ್ದು. ಅದನ್ನು ಬಿಟ್ಟು ಸುದ್ದಿ ನೆಪ ಮಾಡಿ ದೂರು ದಾಖಲಿಸಿರುವುದು ದ್ವೇಷದ ನಡವಳಿಕೆಗೆ ಇಂಬು ನೀಡಿದಂತಾಗಿದೆ.

ಈ ಹಿಂದೆಯೂ ಪತ್ರಕರ್ತರ ಮೇಲಿನ ಹಲವು ಪ್ರಕರಣಗಳ ಬಗ್ಗೆ ತಮ್ಮ ಗಮನಕ್ಕೆ ತಂದಾಗ ತಾವು ಸ್ಪಂದಿಸಿದ್ದೀರಿ. ಮಾಧ್ಯಮ ಸ್ನೇಹಿಯಾಗಿ ನಡೆದುಕೊಂಡಿದ್ದೀರಿ ಅದನ್ನು ಸಂಘ ಸ್ಮರಿಸುತ್ತದೆ.

ವಿಶ್ವವಾಣಿ ಮೇಲೆ ದೂರು ದಾಖಲಿಸಿರುವುದು ತಮ್ಮ ಗಮನಕ್ಕೆ ಬಾರದೆಯೂ ಇರಬಹುದು. ಈ ಬಗ್ಗೆ ತಾವು ಮಾಹಿತಿ ತರಿಸಿಕೊಂಡು ಪರಿಶೀಲಿಸಿ ಪ್ರಕರಣ ಅಂತ್ಯಗೊಳಿಸಬೇಕು ಎನ್ನುವುದು ವಿನಮ್ರ ಮನವಿ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದ್ವೇಷದ, ಕಿಚ್ಚಿನ ನಡೆ ಒಳ್ಳೆಯದಲ್ಲ. 

ಮಾಧ್ಯಮ ಮತ್ತು ಸರ್ಕಾರದ ನಡುವೆ ಸೌಹಾರ್ದ ವಾತಾವರಣ ಇರುವಂತಾಗಲು ನಾಡಿನ ಮುಖ್ಯಮಂತ್ರಿಯಾಗಿ ತಾವು ಪ್ರಜ್ಞಾಪೂರ್ವಕವಾಗಿ ಸಂಯಮದ ಹೆಜ್ಜೆ ಇಡಬೇಕು ಎಂದು ಆಶಿಸುತ್ತೇನೆ. 

ಕದಡಿದ ವಾತಾವಾರಣ ತಿಳಿಗೊಳಿಸಲು, ತಾವು ಇಚ್ಚಿಸಿದಲ್ಲಿ ಸಂವಾದಕ್ಕೂ ಸಿದ್ಧವಿದ್ದೇವೆ ಎಂಬುದನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ.

ಹೀಗಂತ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಅಧ್ಯಕ್ಷ ಶಿವಾನಂದ ತಗಡೂರು, ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments