Publish Date: Tue, 21 Feb 2023 (12:52 IST)
Updated Date: Tue, 21 Feb 2023 (12:45 IST)
ಉಡುಪಿ : ರಾಜಕೀಯ ಕಾರ್ಯಕ್ರಮಗಳಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೋಮವಾರ ಕರಾವಳಿಯ ಸನ್ಯಾಸಿಗಳ ಜೊತೆ ಸಭೆ ಮಾಡಿ ಚರ್ಚೆ ಮಾಡಿದ್ದಾರೆ.
ಮುಂಬರುವ ಚುನಾವಣಾ ಹೊಸ್ತಿಲಲ್ಲಿ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಬೇಡಿಕೆಗಳ ಜೊತೆ ಕೆಲ ಸೂಚನೆಗಳನ್ನು ಸ್ವಾಮೀಜಿಗಳು ಜೆ.ಪಿ ನಡ್ಡಾಗೆ ನೀಡಿದ್ದಾರೆ.
ಜೆಪಿ ನಡ್ಡಾ ಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥರಿಂದ ಮಂತ್ರಾಕ್ಷತೆ ಸ್ವೀಕರಿಸಿದರು. ಪೇಜಾವರ ಮಠದ ಶ್ರೀ ರಾಮವಿಠಲ ಸಭಾಭವನದಲ್ಲಿ ಜೆ.ಪಿ. ನಡ್ಡಾ ಅವರೊಂದಿಗೆ ಕರಾವಳಿಯ 15 ಸ್ವಾಮೀಜಿಗಳ ಸಭೆ ನಡೆಸಿದರು.