ಜಡ್ಜ್ ಗೆ ಹೃದಯಾಘಾತ: ಶಿವಮೊಗ್ಗದಿಂದ ತುಮಕೂರಿಗೆ ಝೀರೊ ಟ್ರಾಫಿಕ್ ನಲ್ಲಿ ರವಾನೆ!

Webdunia
ಬುಧವಾರ, 25 ಮೇ 2022 (20:24 IST)
ಹೃದಯಾಘಾತಕ್ಕೆ ಒಳಗಾದ ನ್ಯಾಯಾಧೀಶರನ್ನು ಝೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ತುಮಕೂರಿಗೆ ಕರೆತಂದು ಚಿಕಿತ್ಸೆ ಒದಗಿಸಿದ ಘಟನೆ ಬುಧವಾರ ನಡೆದಿದೆ.
ನ್ಯಾಯಾಧೀಶ ಸದಾನಂದ ಎಂ ಕಲಾಲ್ ಅವರಿಗೆ ಮಧ್ಯಾಹ್ನ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಶಿವಮೊಗ್ಗದಿಂದ ಬೆಂಗಳೂರಿಗೆ ಆಂಬುಲೆನ್ಸ್ ನಲ್ಲಿ ಬೆಂಗಳೂರಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಯಿತು.
ತುಮಕೂರು ಮಾರ್ಗವಾಗಿ ಬರುತ್ತಿದ್ದಂತೆ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಕೂಡಲೇ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗಿದೆ.
ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದ ನ್ಯಾಯಾಧೀಶ ಕಲಾಲ್ ಅವರಿಗೆ ಮಾರ್ಗಮಧ್ಯೆದಲ್ಲಿ ಕಾರ್ಡಿಯಾಕ್ ಅರೆಸ್ಟ್ ಆಗಿದೆ. ಇದರಿಂದ ಮಠದ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಒದಗಿಸಲಾಗಿದೆ.
ತುಮಕೂರು ಜಿಲ್ಲೆಯ ತಿಪಟೂರು, ಗುಬ್ಬಿ ಹಾಗೂ ತುಮಕೂರು ನಗರದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗುತ್ತಿತ್ತು.
ಪ್ರಸ್ತುತ ಶಿವಮೊಗ್ಗದಲ್ಲಿ ಗ್ರಾಹಕರ ಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಧಾರವಾಡದಲ್ಲಿ ನ್ಯಾಯಾಧೀಶರಾಗಿ ನಿವೃತ್ತಿ ಹೊಂದಿದ್ದರು. ಹಿಂದೆ ಮೂತ್ರಪಿಂಡ ಟ್ರಾನ್ಸ್ಲೇಷನ್ ಚಿಕಿತ್ಸೆ ಕೂಡ ನೀಡಲಾಗಿದೆ.10 ದಿನಗಳ ಹಿಂದಷ್ಟೇ ಅಪಘಾತಕ್ಕೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೇಡ ಅನ್ನಕ್ಕಾಯ್ತದಾ.. ಡಿನ್ನರ್ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments