Select Your Language

Notifications

webdunia
webdunia
webdunia
webdunia

ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಮೂವರಿಗೆ ನ್ಯಾಯಾಂಗ ಬಂಧನ

bengaluru
ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ಮನೆ ಆವರಣದಲ್ಲಿ ನಿಲ್ಲಿಸಿದ್ದ ಎರಡು ದುಬಾರಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬಂ
ಧಿತರಾಗಿರುವ ಮೂವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. 
ಗಾರ್ವೆಬಾವಿಪಾಳ್ಯದ ಸಾಗರ್ ತಾಪ (19),ಬಂಡೆಪಾಳ್ಯದ ನವೀನ್ ಕಾಳಪ್ಪ (22), ಶ್ರೀಧರ್‍ಗೌಡ (20)ನನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಒಬ್ಬೊಬ್ಬರು ಒಂದೊಂದು ರೀತಿಯ ಗೊಂದಲಕಾರಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಹಾಗೂ ಪ್ರಕರಣಕ್ಕೂ ಸಾಕಷ್ಟು ವ್ಯತ್ಯಾಸಗಳಿದ್ದವು. ಜತೆಗೆ ರೌಡಿಶೀಟರ್ ಕೇಬಲ್ ಸೋಮಶೇಖರ್ ಎಂಬಾತ ಕೃತ್ಯದ ಪ್ರಮುಖ ಸೂತ್ರಧಾರಿ ಎಂಬ ಸುದ್ದಿಯೂ ಹರಿದಾಡುತ್ತಿತ್ತು.
ಆರೋಪಿಗಳು ಈ ಬಗ್ಗೆ ಸಣ್ಣ ಸುಳಿವು ನೀಡಿದ್ದರು. ಹೀಗಾಗಿ, ಈ ಎಲ್ಲ ಮಜಲುಗಳಲ್ಲೂ ತನಿಖೆ ನಡೆಸಬೇಕಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ನಂಬರ್ ನಲ್ಲಿ ಓಡುತ್ತಿದ್ದ ಮೂರು ಬಸ್!