Webdunia - Bharat's app for daily news and videos

Install App

ನಮಗೆ ಐದು ಕೋಟಿ ಕೊಟ್ಟು ಬಿಡಿ: ಬೇಡಿಕೆಯಿಟ್ಟ ಬಿಜೆಪಿ

Sampriya
ಗುರುವಾರ, 6 ಮಾರ್ಚ್ 2025 (20:41 IST)
ಬೆಂಗಳೂರು: ರಾಜ್ಯದ 2025-26ರ ಬಜೆಟ್‍ನಲ್ಲಿ ಪ್ರತಿ ಶಾಸಕರ ವಿಧಾನಸಭಾ ಮತ ಕ್ಷೇತ್ರಗಳಿಗೆ ಶಾಸಕರ ಕ್ಷೇತ್ರಾಭಿವೃದ್ಧಿಗೆ ಈಗಿರುವ ಅನುದಾನಕ್ಕೆ 5 ಕೋಟಿ ಹೆಚ್ಚುವರಿಯಾಗಿ ಸೇರಿಸಿ ಪ್ರಕಟಿಸುವಂತೆ ಬಿಜೆಪಿ- ಜೆಡಿಎಸ್ ಶಾಸಕರು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಇಂದು ಬಿಜೆಪಿ- ಜೆಡಿಎಸ್ ಶಾಸಕರ ನಿಯೋಗವು ಭೇಟಿ ಮಾಡಿ ಈ ಕುರಿತ ಮನವಿ ಸಲ್ಲಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ್ ಅವರು ಸಹಿ ಮಾಡಿದ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.

ಹೆಚ್ಚುವರಿ ಅನುದಾನವನ್ನು ನಾಳೆ ಮಂಡಿಸುವ ರಾಜ್ಯದ 2025-26ರ ಆಯವ್ಯಯ ಪತ್ರದಲ್ಲಿ ಘೋಷಿಸುವಂತೆ ಮನವಿ ಮಾಡಿದ್ದಾರೆ. ನಮ್ಮೆಲ್ಲರ ಈ ವಿಧಾನಸಭಾ ಕ್ಷೇತ್ರಗಳ ಮೂಲಭೂತ ಸೌಕರ್ಯದ ನಿರ್ಮಾಣ ಕಾರ್ಯಗಳಿಗೆ, ರಸ್ತೆ ನಿರ್ಮಾಣ, ಮೂಲಭೂತ ಅಭಿವೃದ್ಧಿ ಸೌಕರ್ಯಗಳಿಗೆ ಎಂದು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನವನ್ನು ಇದೇ ಬಜೆಟ್‍ನಲ್ಲಿ ಘೋಷಿಸಿ ಒದಗಿಸಬೇಕೆಂದು ವಿನಂತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments