Webdunia - Bharat's app for daily news and videos

Install App

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದವರನ್ನು ಒಂದು ಮಾಡಿದ ನ್ಯಾಯಧೀಶರು

Webdunia
ಸೋಮವಾರ, 13 ಆಗಸ್ಟ್ 2018 (09:44 IST)
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಗರದ ನೂತನ ತಾಲೂಕು ನ್ಯಾಯಾಲಯ ಸಂಕೀರ್ಣ ಉದ್ಘಾಟನೆಗೆ ಬಂದಿದ್ದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ದೀಪಕರ್ ಮಿಶ್ರಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿಯನ್ನು ಒಂದು ಮಾಡಿದ್ದಾರೆ.
 
ನ್ಯಾಯಾಲಯದಲ್ಲಿ ಏರ್ಪಡಿಸಿದ್ದ ವಿಶೇಷ ಲೋಕ ಅದಾಲತ್ ನಲ್ಲಿ ವಿಚ್ಛೇನದ ಬಯಸಿ ಅರ್ಜಿ ಸಲ್ಲಿಸಿದ್ದ ಜಗದೀಶ ಶೆಳಗಿ ಮತ್ತು ಪಾರ್ವತಿ ದಂಪತಿಯನ್ನು ಮಾತುಕತೆ ಮೂಲಕ ತಿಳಿಹೇಳಿ ನ್ಯಾಯಾಧೀಶರು ಪ್ರಕರಣ ಹಿಂಪಡೆದು ಮತ್ತೆ ಒಂದಾಗಿ ಬಾಳುವಂತೆ ಮಾಡಿದ್ದಾರೆ.

ಈ ದಂಪತಿಗೆ ನಾಲ್ವರಿ ಮಕ್ಕಳೂ ಇದ್ದರು. ಈ ವಿಚಾರಣೆ ಸಂದರ್ಭ ನ್ಯಾ. ದೀಪಕ್ ಮಿಶ್ರಾ ನಾಲ್ವರು ಮಕ್ಕಳನ್ನೂ ಕರೆಸಿ ದಂಪತಿಗೆ ಬುದ್ಧಿ ಹೇಳಿ ಒಂದಾಗಿ ಬಾಳಲು ಸಲಹೆ ಮಾಡಿದರು. ನ್ಯಾಯಾಧೀಶರ ಸಲಹೆಯಂತೆ ದಂಪತಿ ವಿಚ್ಛೇದನ ಪ್ರಕರಣ ಹಿಂಪಡೆದು ಮತ್ತೆ ಒಂದಾಗಿ ಬಾಳಲು ಒಪ್ಪಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments