ಮೃತದೇಹ ಹುಡುಕಲು ಹೋಗಿದ್ದ ಜ್ಯೋತಿರಾಜ್ ಜೋಗ ಜಲಪಾತದಲ್ಲಿ ನಾಪತ್ತೆ!

Webdunia
ಬುಧವಾರ, 28 ಫೆಬ್ರವರಿ 2018 (06:34 IST)
ಶಿವಮೊಗ್ಗ: ಜೋಗ ಜಲಪಾತಕ್ಕೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಆತಂಕ ಸೃಷ್ಟಿಯಾಗಿದೆ.


ಮೃತದೇಹ ಹುಡುಕಲೆಂದು ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್‌ ತಂಡ ತಟದಲ್ಲಿ ಶೋಧ ನಡೆಸಿತ್ತು. ನಂತರ ರಾಜ ಹಾಗೂ ರೋರರ್ ಜಲಪಾತದ ಮಧ್ಯೆ ಗುಹೆಯಂತಿರುವ ಪ್ರದೇಶದ ಬಳಿ ಹೋದ ಜ್ಯೋತಿರಾಜ್‌ ನಾಪತ್ತೆಯಾಗಿದ್ದಾರೆ.


ಬೆಂಗಳೂರಿನ ಮಂಜುನಾಥ್ ಮೂರು ದಿನಗಳ ಹಿಂದೆ ಬೈಕ್‌ನಲ್ಲಿ ಜೋಗಕ್ಕೆ ಬಂದು ಡೆತ್‌ನೋಟ್ ಬರೆದಿಟ್ಟು ಜಲಪಾತಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಜಲಪಾತದ ಬಳಿ ಬೈಕ್ ಮತ್ತು ಡೆತ್‌ನೋಟ್ ಪತ್ತೆಯಾಗಿದೆ. ಜ್ಯೋತಿರಾಜ್ ಅವರು ಈ ಹಿಂದೆ ಜೋಗ ಜಲಪಾತದಲ್ಲಿ ಹಲವು ಮೃತದೇಹಗಳನ್ನು ಹುಡುಕಿ ತೆಗೆದಿದ್ದರು. ಇದನ್ನು ತಿಳಿದ ಮಂಜುನಾಥ್ ನ ಕುಟುಂಬದವರು ಮೃತದೇಹ ಹುಡುಕಿಕೊಡುವಂತೆ ಜ್ಯೋತಿರಾಜ್ ಬಳಿ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆ ಜ್ಯೋತಿರಾಜ್ ಜೋಗಕ್ಕೆ ಬಂದಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಕ್ರಮವಾಗಿ ಮತಪಟ್ಟಿ ಪರಿಷ್ಕರಣೆ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲು ಮುಂದಾದ ಬಿಜೆಪಿ

ದೆಹಲಿ ಮೆಟ್ರೋದಲ್ಲಿ ಸಾರ್ವಜನಿಕವಾಗಿಯೇ ಯುವ ಜೋಡಿಯ ರೊಮ್ಯಾನ್ಸ್: ನೆಟ್ಟಿಗರ ಆಕ್ರೋಶ Video

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ಮುಂದಿನ ಸುದ್ದಿ
Show comments