Webdunia - Bharat's app for daily news and videos

Install App

ಹುಟ್ಟುಹಬ್ಬದ ದಿನವೇ ಸೋಲಿನ ಕಹಿ ಉಂಡ ಕೆ.ಅಣ್ಣಾಮಲೈ

sampriya
ಮಂಗಳವಾರ, 4 ಜೂನ್ 2024 (16:28 IST)
Photo By X
ಚೆನ್ನೈ: ಪೊಲೀಸ್‌ ಇಲಾಖೆ ಕರ್ತವ್ಯಕ್ಕೆ ರಾಜೀನಾಮೆ ನೀಡಿ  ತಮಿಳುನಾಡಿನ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ತಮ್ಮ ಹುಟ್ಟು ಹಬ್ಬದ ದಿನವೇ ಸೋಲಿನ ಕಹಿಯಾಗಿದೆ.

ಇಂದು 40ನೇ ಹುಟ್ಟುಹಬ್ಬದಲ್ಲಿರುವ ಅಣ್ಣಾಮಲೈ ಅವರಿಗೆ  ಡಿಎಂಕೆ ಗಣಪತಿ ರಾಜ್‌ಕುಮಾರ್ ವಿರುದ್ಧ 17,366 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.

ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದ ಅಣ್ಣಾಮಲೈ ಅವರು ಗೆಲುವು ಸಾಧಿಸಲು ಮಾಸ್ಟರ್‌ ಪ್ಲಾನ್‌ ನಡೆಸಿದ್ದರು. ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಕೆ.ಅಣ್ಣಾಮಲೈ ಅವರು ಬಿರುಸಿನ ಪ್ರಚಾರ ಮಾಡಿ ಗೆಲುವಿಗಾಗಿ ಪಣ ತೊಟ್ಟಿದ್ದರು.

ಲೋಕಸಭೆ ಚುನಾವಣೆ ಘೋಷಣೆ ಆದ ಬೆನ್ನಲ್ಲೇ ಗೆಲುವಿನ ಲೆಕ್ಕಾಚಾರ ಹಾಕಿಕೊಂಡು ಕೆಲಸ ಶುರು ಮಾಡಿದ ಅಣ್ಣಾಮಲೈ ಅವರು ನಿರಂತರ ಪ್ರಚಾರ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹೊಸ ಹವಾ ಸೃಷ್ಟಿಸಿದ್ದರು. ಅದಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ ಅಣ್ಣಾಮಲೈ ಪರ ಮತಯಾಚನೆ ಮಾಡಿ, ರೋಡ್‌ ಶೋ ನಡೆಸಿದ್ದರು. ಆದರೆ ಈ ಎಲ್ಲ ಲೆಕ್ಕಚಾರ ಕೆಲಸವಾಗದೆ ಸೋಲು ಅನುಭವಿಸಿದ್ದಾರೆ.









 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments