Webdunia - Bharat's app for daily news and videos

Install App

ಶಾಸಕರನ್ನು ಪರೋಕ್ಷವಾಗಿ ಎಮ್ಮೆಗೆ ಹೋಲಿಸಿದ ಕೆ.ಬಿ.ಕೋಳಿವಾಡ್

Webdunia
ಗುರುವಾರ, 20 ಅಕ್ಟೋಬರ್ 2016 (15:01 IST)
ಎಮ್ಮೆಯನ್ನು ನೀರಿನವರೆಗೆ ಕರೆದುಕೊಂಡು ಹೋಗಬಹುದು. ಆದರೆ, ನೀರು ಕುಡಿಸಲು ಸಾಧ್ಯವಿಲ್ಲ ಎನ್ನುವ ಮೂಲಕ ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರು ಪರೋಕ್ಷವಾಗಿ ಶಾಸಕರನ್ನು ಎಮ್ಮೆಗೆ ಹೋಲಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಶಾಸಕರು ಒಂದು ಬಾರಿ ಹಾಜರಾತಿ ಹಾಕುವ ಪ್ರಕ್ರಿಯೆ ಇದೆ. ಆದರೆ, ಮೂರು ಬಾರಿ ಹಾಜರಾತಿ ಹಾಕುವ ಪ್ರಕ್ರಿಯೆ ಜಾರಿಗೆ ತರಲು ಚಿಂತಿಸಲಾಗುತ್ತಿದೆ. ಹೀಗೆ ಮಾಡಿದರೆ ಸದನದಲ್ಲಿ ಬಹುತೇಕ ಶಾಸಕರು ಹಾಜರಾಗುವ ಸಾಧ್ಯತೆಗಳಿವೆ ಎಂದು ಅಭಿಪ್ರಾಯಪಟ್ಟರು.
 
ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ವಿಚಾರ.....
 
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ಪರಿಶೀಲನೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ನಿರ್ಧಾರ ಪ್ರಕಟಿಸುತ್ತೇನೆ. ಈಗಾಗಲೇ ಶ್ರೀನಿವಾಸ್ ಪ್ರಸಾದ್ ಅವರ ಜೊತೆ ಮಾತನಾಡಿದ್ದೇನೆ. ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕರಿಸದಂತೆ ನನ್ನ ಮೇಲೆ ಯಾವ ಒತ್ತಡವು ಇಲ್ಲ ಎಂದು ಸ್ಪಷ್ಟಪಡಿಸಿದರು.
 
ರಾಜಕಾಲುವೆ ಒತ್ತುವರಿ ವಿಷಯ.....
 
ರಾಜಕಾಲುವೆ ಹಾಗೂ ಕೆರೆ ಒತ್ತುವರಿ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ರಾಜಕಾಲುವೆ ಬಫರ್ ಜೋನ್ ಕುರಿತು ನಾಳೆ ಸಭೆ ನಡೆಸುತ್ತೇನೆ. ಸಂಪೂರ್ಣ ಮಾಹಿತಿ ಪಡೆದುಕೊಂಡು ವರದಿ ಸಲ್ಲಿಸುತ್ತೇನೆ. ನಗರದಲ್ಲಿ ಒಟ್ಟು 1500 ಎಕರೆ ಪ್ರದೇಶ ಒತ್ತುವರಿ ಆಗಿರುವುದು ಖಚಿತ ಎಂದು ಸ್ಪೀಕರ್ ಕೆ.ಬಿ.ಕೋಳಿವಾಡ್ ಮಾಹಿತಿ ನೀಡಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments