Select Your Language

Notifications

webdunia
webdunia
webdunia
webdunia

ಶಾಸಕ ಕೆ.ಬಿ.ಕೋಳಿವಾಡ್ ಸಭಾಧ್ಯಕ್ಷರಾಗಿ ಅವಿರೋಧ ಆಯ್ಕೆ

ಶಾಸಕ ಕೆ.ಬಿ.ಕೋಳಿವಾಡ್
ಬೆಂಗಳೂರು , ಮಂಗಳವಾರ, 5 ಜುಲೈ 2016 (19:05 IST)
ರಾಜ್ಯ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿ, ಸಚಿವ ಸ್ಥಾನ ಗಿಟ್ಟಿಸುವಲ್ಲಿ ವಿಫಲರಾಗಿದ್ದ ರಾಣೆಬೆನ್ನೂರಿನ ಶಾಸಕ ಕೆ.ಬಿ.ಕೋಳಿವಾಡ್ ಅವರು ವಿಧಾನಸಭಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ
 
ರಾಣೆಬೆನ್ನೂರಿನ ಶಾಸಕ ಕೆ.ಬಿ.ಕೋಳಿವಾಡ್ ಅವರು ವಿಧಾನಸಭೆ ಸ್ಪೀಕರ್ ಅಧಿಕಾರ ವಹಿಸಿಕೊಳ್ಳಲು ಸಿದ್ಧನಿದ್ದೇನೆ ಎಂದು ಒಪ್ಪಿಗೆ ಪತ್ರವನ್ನು ವಿಧಾನಸಭೆ ಕಾರ್ಯದರ್ಶಿ ಅವರಿಗೆ ಹಸ್ತಾಂತರಿಸಿದ್ದರು.
 
ವಿಧಾನಸಭೆ ಚುನಾವಣೆಗೆ ಒಂದೇ ನಾಮಪತ್ರ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ರಾಣೆಬೆನ್ನೂರಿನ ಶಾಸಕ ಕೆ.ಬಿ.ಕೋಳಿವಾಡ್ ಅವರು ಅವಿರೋಧವಾಗಿ ವಿಧಾನಸಭಾಧ್ಯಕ್ಷರ ಹುದ್ದೆಗೆ ಆಯ್ಕೆಯಾಗಿದ್ದಾರೆ. 
 
ವಿಧಾನಸಭಾಧ್ಯಕ್ಷರ ಹುದ್ದೆಗೆ ಕೋಳಿವಾಡ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿರೋಧ ಪಕ್ಷದ ನಾಯಕರು ಅವರನ್ನು ಸಭಾಧ್ಯಕ್ಷರು ಆಸನಕ್ಕೆ ಕರೆದೊಯ್ದು ಅಭಿನಂದನೆ ಸಲ್ಲಿಸಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವರದಕ್ಷಿಣೆ ಕಿರುಕುಳ ಪ್ರಕರಣ: ಕೇಸ್‌ನಿಂದ ರಾಧೇ ಮಾ ಹೆಸರು ಗಾಯಬ್