ರಾಜ್ಯ ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸಿ ಸಚಿವ ಸ್ಥಾನ ಗಿಟ್ಟಿಸುವಲ್ಲಿ ವಿಫಲರಾಗಿದ್ದ ಕೆ.ಬಿ.ಕೋಳಿವಾಡ್ ಅವರು ವಿಧಾನಸಭೆಯ ನೂತನ ಸಭಾಪತಿಯಾಗಿ ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ
ಈ ಹಿಂದೆ ಸಭಾಪತಿ ಆಗಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸ್ಥಾನದೊರೆತ್ತಿದ್ದು, ಅವರಿಂದ ಖಾಲಿಯಾಗಿರುವ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಸಭಾಪತಿ ಚುನಾವಣೆಗೆ ಯಾರು ನಾಮಪತ್ರ ಸಲ್ಲಿಸದಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅವರು ಕೋಳಿವಾಡ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಕೆ.ಬಿ.ಕೋಳಿವಾಡ್ ಅವರು ನಾಳೆಯೇ ನೂತನ ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದು, ವಿಧಾನಸಭೆ ನಾಯಕರು ಮತ್ತು ಪ್ರತಿಪಕ್ಷ ನಾಯಕರು ಅಭಿನಂದನೆ ಸಲ್ಲಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ