ಖರ್ಗೆ ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ನನಗೆ ತಿಳಿದಿಲ್ಲ: ಪರರಮೇಶ್ವರ್

Webdunia
ಬುಧವಾರ, 10 ಮೇ 2017 (11:44 IST)
ಮುಂಬರುವ ವಿಧಾನಸಭಾ ಚುನಾವಣೆ ಮತ್ತು ಕೆಪಿಸಿಸಿ ಅಧ್ಯಕ್ಷರ ಕುರಿತಾದ ಚರ್ಚೆಗೆ ಸಿಎಂ ನಿವಾಸದಲ್ಲಿ ಕರೆದಿದ್ದ ಉಪಾಹಾರಕೂಟ ಮುಕ್ತಾಯಗೊಂಡಿದೆ. ಸಭೆಯಲ್ಲಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು.

ಸಭೆ ಬಳಿಕ ಮಾತನಾಡಿದ ಪರಮೇಶ್ವರ್, ನನ್ನನ್ನ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಸುವ ಬಗ್ಗೆ ಚರ್ಚೆ ನಡೆದಿದೆ. ಹೊಸಬರನ್ನ ತರುವ ಕುರಿತಂತೆಯೂ ಅಭಿಪ್ರಾಯ ಸಂಗ್ರಹಿಸಿರಬಹುದು ಎಂದು ತಿಳಿಸಿದ್ದಾರೆ. ಇದೇವೇಳೆ, 2018ರ ಚುನಾವಣೆ ಮತ್ತು ಬರವಿರುವುದರಿಂದ ರಾಜ್ಯದಲ್ಲಿ ಸರ್ಕಾರ ಕೈಗೊಂಡ ಪರಿಹಾರ ಕಾರ್ಯಕ್ರಮದ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಪರಮೇಶ್ವರ್ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ನನಗೆ ತಿಳಿದಿಲ್ಲ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ವಿಧಾನಸಭಾ ಚುನಾವಣೆಗೆ ಹಲವು ತಿಂಗಳುಗಳೇ ಬಾಕಿ ಉಳಿದಿದ್ದರೂ ಕಾಂಗ್ರೆಸ್`ನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬೆಂಗಳೂರಲ್ಲೇ ವಾಸ್ತವ್ಯ ಹೂಡಿದ್ದು, ರಾಜ್ಯ ಕಾಂಗ್ರೆಸ್`ಗೆ ಸರ್ಜರಿ ನಡೆಸಿದ್ದಾರೆ. ನಿನ್ನೆ ಮೊನ್ನೆ ಎರಡೂ ದಿನ ುಸ್ತುವಾರಿಯನ್ನ ಭೇಟಿ ಮಾಡಿದ್ದ ಕಾಂಗ್ರೆಸ್ ಮುಖಂಡರು ಸಿಎಂ ಮತ್ತು ಪರಮೇಶ್ವರ್ ವಿರುದ್ಧ ದೂರಿದ್ದರು. ಇದರ ಬೆನ್ನಲ್ಲೇ ಇಂದು ಉಪಾಹಾರಕೂಟದ ನೆಪದಲ್ಲಿ ಸಿಎಂ ಟೀಮ್ ಜೊತೆ ಸಭೆ ನಡೆಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments