Webdunia - Bharat's app for daily news and videos

Install App

ಸಚಿವ ರಾಜೀನಾಮೆ ನೀಡದಿದ್ರೆ ರಾಜ್ಯದಾದ್ಯಂತ ಹೋರಾಟ: ಬಿಎಸ್‌ವೈ ಎಚ್ಚರಿಕೆ

Webdunia
ಶುಕ್ರವಾರ, 27 ಅಕ್ಟೋಬರ್ 2017 (18:33 IST)
ಗಣಪತಿ ಪ್ರಕರಣದ ತನಿಖೆಗೆ ಕೇಂದ್ರ ಸರಕಾರ ಆದೇಶ ನೀಡಿಲ್ಲ. ಕೋರ್ಟ್‌ ಆದೇಶದ ಮೇರೆಗೆ ಸಿಬಿಐ ತನಿಖೆ ನಡೆಸುತ್ತಿದ್ದು ಸಚಿವ ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಗಣಪತಿ ಪ್ರಕರಣದಲ್ಲಿ ನಂಬರ್ ಒನ್ ಆರೋಪಿಯಾಗಿರುವ ಸಚಿವ ಜಾರ್ಜ್‌ರನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿತನದ ಸಂಗತಿ ಎಂದು ಹರಿಹಾಯ್ದರು.
 
ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಸಿಐಡಿ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರು. ಯಾಕೆಂದರೆ ಸಿಐಡಿ ಅವರಿಗೆ ಕ್ಲೀನ್ ಚಿಟ್ ನೀಡುತ್ತದೆ ಎನ್ನುವುದು ತಿಳಿದಿತ್ತು. ಇದೀಗ ಸಿಬಿಐ ಎಫ್‌ಐಆರ್ ದಾಖಲಿಸಿದರೂ ರಾಜೀನಾಮೆಗೆ ಹಿಂದೇಟು ಹಾಕುತ್ತಿರುವುದು ಸರಿಯಲ್ಲ ಎಂದರು.
 
ಸಚಿವ ಜಾರ್ಜ್ ರಾಜೀನಾಮೆ ನೀಡುವವರೆಗೆ ಬಿಜೆಪಿ ರಾಜ್ಯದಾದ್ಯಂತ ಹೋರಾಟ ನಡೆಸಲಿದೆ. ಮುಂಬರುವ ಅಧಿವೇಶನದಲ್ಲಿ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments