Select Your Language

Notifications

webdunia
webdunia
webdunia
webdunia

ವಿರೋಧದ ಮಧ್ಯೆಯೂ ಮತ್ತೆ ಸಚಿವ ಸಂಪುಟ ಸೇರಿದ ಜಾರ್ಜ್

ವಿರೋಧದ ಮಧ್ಯೆಯೂ ಮತ್ತೆ ಸಚಿವ ಸಂಪುಟ ಸೇರಿದ ಜಾರ್ಜ್
ಬೆಂಗಳೂರು , ಸೋಮವಾರ, 26 ಸೆಪ್ಟಂಬರ್ 2016 (12:23 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ.ಜಾರ್ಜ್ ಅವರು ಇಂದು ಮತ್ತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
 
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ಅವರು ಕೆ.ಜೆ.ಜಾರ್ಜ್ ಅವರಿಗೆ ಪ್ರಮಾಣವಚನ ಬೋಧಿಸಿದರು.
 
ಕೆ.ಜೆ.ಜಾರ್ಜ್ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುತ್ತಿರುವ ನಿರ್ಧಾರಕ್ಕೆ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲರನ್ನೂ ದೂರವಿಟ್ಟು ಪ್ರಮಾಣವಚನ ಸ್ವೀಕರಿಸಿದರು ಎಂದು ಹೇಳಲಾಗುತ್ತಿದೆ. 
 
ಕೆ.ಜೆ.ಜಾರ್ಜ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರಾದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರಾಮಲಿಂಗಾರೆಡ್ಡಿ, ಎಚ್‌.ಎಸ್.ಮಹದೇವ ಪ್ರಸಾದ್, ಡಿ.ಕೆ.ಶಿವಕುಮಾರ್, ಪ್ರೀಯಾಂಕ್ ಖರ್ಗೆ, ಯು.ಟಿ.ಖಾದರ್ ಹಾಜರಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀ ಹರಿಕೋಟಾ: ಎಂಟು ಉಪಗ್ರಹಗಳ ಯಶಸ್ವಿ ಉಡಾವಣೆ