Publish Date: Fri, 04 Nov 2016 (15:04 IST)
Updated Date: Fri, 04 Nov 2016 (15:16 IST)
ಕಾಂಗ್ರೆಸ್ ಪಕ್ಷದಿಂದ ಅಮಾನತ್ತುಗೊಂಡಿದ್ದ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರಿಗೌಡ ಅಮಾನತು ಆದೇಶವನ್ನು ಕೆಪಿಸಿಸಿ ಹಿಂಪಡೆದಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಶಿಖಾ ವಿರುದ್ಧ ಅಸಭ್ಯ ವರ್ತನೆ ತೋರಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡು ನಂತರ ಕೋರ್ಟ್ಗೆ ಶರಣಾಗಿ ಜೈಲುವಾಸ ಅನುಭವಿಸಿದ ಮರಿಗೌಡ ಇದೀಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.
ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್.ಎಸ್. ಭೋಸರಾಜು, ಮರಿಗೌಡರ ಅಮಾನತು ಆದೇಶವನ್ನು ರದ್ದುಗೊಳಿಸಿದ್ದಾರೆ.
ಮೈಸೂರಿನ ನಂಜನಗೂಡಿನಲ್ಲಿ ವಿಧಾನಸಭೆಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರು ಮೂಲದ ಮರಿಗೌಡನ ಅಮಾನತು ಆದೇಶ ಹಿಂಪಡೆಯಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ