Select Your Language

Notifications

webdunia
webdunia
webdunia
webdunia

ಕೆ. ಎನ್. ರಾಜಣ್ಣ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ

ಕೆ. ಎನ್. ರಾಜಣ್ಣ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ
ಬೆಂಗಳೂರು , ಸೋಮವಾರ, 4 ಜುಲೈ 2022 (14:20 IST)
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ, ಕೆ ಎನ್ ರಾಜಣ್ಣ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ' ರಾಜಣ್ಣ ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಕ್ಷಮೆ ಕೇಳಬೇಕು ಎಂದು ನಾನು ಹಾಗೂ ಪಕ್ಷದ ವರಿಷ್ಠರು ಸೂಚಿಸಿದರು. ಅವರು ಕೂಡ ಗೌರವಯುತವಾಗಿ ಕ್ಷಮೆ ಕೇಳಿದ್ದಾರೆ. ಈ ವಿಚಾರ ಇಲ್ಲಿಗೆ ಬಿಡೋಣ. ನಮ್ಮನ್ನು ಒಂದಲ್ಲಾ ಒಂದು ದಿನ ಹೊತ್ತುಕೊಂಡು ಹೋಗಬೇಕು. ಇದೇ ಪ್ರಕೃತಿ ನಿಯಮ ' ಎಂದು ಉತ್ತರಿಸಿದರು.
 
ರಾಹುಲ್ ಗಾಂಧಿ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ' ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ನಾಯಕರು ಸೇರಿದಂತೆ ಎಲ್ಲರೂ ಮಾತನಾಡುತ್ತಿದ್ದಾರೆ. ಈ ಅವಕಾಶವನ್ನು ನಾವು ಬಳಸಿಕೊಳ್ಳಬೇಕು. ಪಕ್ಷದ ವತಿಯಿಂದ ನಾವು ಪ್ರತ್ಯೇಕ ಸಮೀಕ್ಷೆ ನಡೆಸಿದ್ದು, ವರದಿ ಪಕ್ಷದ ಪರವಾಗಿದೆ. ಸಮೀಕ್ಷೆ ಪಕ್ಕಕ್ಕಿಟ್ಟರೂ ಇತ್ತೀಚೆಗೆ ನಡೆದ ಉಪ ಚುನಾವಣೆಗಳಲ್ಲಿ ಬಿಜೆಪಿಯವರು ಎಷ್ಟು ಗೆದ್ದಿದ್ದಾರೋ ನಾವು ಅಷ್ಟೇ ಗೆದ್ದಿದ್ದೇವೆ. ಪರಿಷತ್ ಚುನಾವಣೆಯಲ್ಲೂ ಪಕ್ಷ ಉತ್ತಮ ಸಾಧನೆ ಮಾಡಿದೆ. ನಮ್ಮ ಸರ್ಕಾರ ಇದ್ದಾಗ ಮಂಡ್ಯ, ತುಮಕೂರಿನಲ್ಲಿ ಪಕ್ಷ ಸೋತಿತ್ತು. ಈ ಬಾರಿ ಗೆದ್ದಿದ್ದೇವೆ. ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ನಾವು ಗೆದ್ದಿರಲಿಲ್ಲ. ಈಗ ಗೆದ್ದಿದ್ದೇವೆ. ಚುನಾಯಿತ ಪ್ರತಿನಿಧಿಗಳು ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದರು. ಈಗ ವಿದ್ಯಾವಂತರು, ಶಿಕ್ಷಕರು ಹಾಗೂ ಪ್ರಜ್ಞಾವಂತರು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಇದು ಜನರ ಅಭಿಪ್ರಾಯ ಏನು ಎಂಬುದನ್ನು ತಿಳಿಸುತ್ತಿದೆ. ಎಲ್ಲರೂ ಉತ್ತಮ ಆಡಳಿತಕ್ಕೆ ಕಾಂಗ್ರೆಸ್ ಬರಬೇಕು ಎಂದು ಬಯಸುತ್ತಿದ್ದಾರೆ' ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬುಲ್ಡೋಜರ್ ಡಬಾಳಿಕೆ ಬಡವರ ಮೇಲೆ ಮಾತ್ರ - ಹೆಚ್. ಡಿ. ಕೆ