Select Your Language

Notifications

webdunia
webdunia
webdunia
webdunia

ಕೆ.ಪಿ.ನಂಜುಂಡಿಗೆ ಬಿಜೆಪಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ

ಕೆ.ಪಿ.ನಂಜುಂಡಿಗೆ ಬಿಜೆಪಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ
ಬೆಂಗಳೂರು , ಭಾನುವಾರ, 2 ಜುಲೈ 2017 (12:25 IST)
ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಕೆ.ಪಿ.ನಂಜುಂಡಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
 
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಂಜುಂಡಿಯವರಿಗೆ ಉಪಾಧ್ಯಕ್ಷ ಸ್ಥಾನ ನೀಡಿ ಗೌರವಿಸಲಾಯಿತು.
 
ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತೇನೆ. ಒಂದು ಅಟೆಂಡರ್ ಕೆಲಸ ಕೊಟ್ಟರೂ ಮನಪೂರ್ವಕವಾಗಿ ನಿರ್ವಹಿಸುವುದಾಗಿ ನಂಜುಂಡಿ ಘೋಷಿಸಿದ್ದರು. 
 
ನಂಜುಂಡಿಯವರಿಗೆ ಶೀಘ್ರದಲ್ಲಿ ಉತ್ತಮ ಹುದ್ದೆ ನೀಡುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದರು. ಅದರಂತೆ, ಇಂದು ಯಡಿಯೂರಪ್ಪ, ನಂಜುಂಡಿಯವರಿಗೆ ಉಪಾಧ್ಯಕ್ಷ ಸ್ಥಾನ ನೀಡುವ ಮೂಲಕ ಕೊಟ್ಟು ಭರವಸೆ ಈಡೇರಿಸಿದ್ದಾರೆ. 
 
ಕಾಂಗ್ರೆಸ್ ಪಕ್ಷದಲ್ಲಿದ್ದ ಕೆ.ಪಿ.ನಂಜುಂಡಿ, ವಿಧಾನಪರಿಷತ್ ಸದಸ್ಯ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎನ್ನಲಾಗುತ್ತಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಚಿರತೆ ದಾಳಿ: ವ್ಯಕ್ತಿಯ ಅರ್ಧ ದೇಹವನ್ನೇ ತಿಂದುಬಿಟ್ಟ ಚೀತಾ