Select Your Language

Notifications

webdunia
webdunia
webdunia
webdunia

ಕೆ. ಆರ್. ಮಾರ್ಕೆಟ್ ಶಿಫ್ಟ್

Corona
ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಮಾರುಕಟ್ಟೆಯಲ್ಲಿ ಸಗಟು ಮಾರುಕಟ್ಟೆಯನ್ನು ಸ್ಥಳಾಂತರಿಸುವ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸಿದೆ.
 
ವೀಕೆಂಡ್ ಕರ್ಫ್ಯೂ ಜಾರಿ ಹಾಗೂ ಶೇ. 50- 50 ನಿಯಮ ಜಾರಿಗೆ ಬಂದಿದೆ.
ಮಾರ್ಕೆಟ್ ನಲ್ಲಿ ಜನ ಜಂಗುಳಿ ಹೆಚ್ಚಾಗಿದೆ. ಸಾಮಾನ್ಯ ದಿನದಂತೆ ಖರೀದಿ ಜೋರಾಗಿದ್ದು, ಸಂಕ್ರಾಂತಿ, ವೈಕುಂಠ ಏಕಾದಶಿ ಹಬ್ಬಕ್ಕಾಗಿ ವ್ಯಾಪಾರ ವಹಿವಾಟು ಹೆಚ್ಚಿದೆ.
 
ಈ ಎಲ್ಲ ಕಾರಣಗಳಿಂದ ಮಾರುಕಟ್ಟೆಯನ್ನು ಬಸವನಗುಡಿ ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಬಗ್ಗೆ ಪಾಲಿಕೆ ಚರ್ಚೆಯಲ್ಲಿ ತೊಡಗಿದೆ. ಜನರ ನಿರ್ಲಕ್ಷ್ಯದ ಬಗ್ಗೆ ಮಾಧ್ಯಮಗಳು ಸವಿವರ ವರದಿ ಪ್ರಕಟಿಸಿ ಸರಕಾರ ಹಾಗೂ ಅಧಿಕಾರಿಗಳ ಗಮನ ಸೆಳೆದಿದೆ.
 
ಈ ಹಿನ್ನೆಲೆಯಲ್ಲಿ ಹೂ- ಹಣ್ಣು, ತರಕಾರಿ ವ್ಯಾಪಾರ ಸ್ಥಳವನ್ನು ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಈ ಬಗ್ಗೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುಳಿವು ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲೆ ಕಾಲೇಜು ಬಂದ್