Webdunia - Bharat's app for daily news and videos

Install App

ಯಡಿಯೂರಪ್ಪ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಕೆ.ಎಸ್.ಈಶ್ವರಪ್ಪ

Webdunia
ಬುಧವಾರ, 12 ಅಕ್ಟೋಬರ್ 2016 (14:15 IST)
ಬಿ.ಎಸ್.ಯಡಿಯೂರಪ್ಪ ರಾಜ್ಯಾಧ್ಯಕ್ಷರಾದ ಬಳಿಕ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಮತ್ತೆ ಬಿಎಸ್‌ವೈ ವಿರುದ್ಧ ಹರಿಹಾಯ್ದಿದ್ದಾರೆ.
 
ದಾವಣಗೆರೆಯಲ್ಲಿರುವ ಮಾಜಿ ಸಚಿವ ರವೀಂದ್ರನಾಥ್ ನಿವಾಸಕ್ಕೆ ಭೇಟಿ ನೀಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈ ಬಿಡುವಂತೆ ನನಗೆ ಯಾರು ಹೇಳಿಲ್ಲ ಎಂದು ಹೇಳಿದರು.
 
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಮ್‌ಲಾಲ್ ಅವರು ರಾಯಣ್ಣ ಬ್ರಿಗೇಡ್ ಕೈಬಿಟ್ಟು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರೊಂದಿಗೆ ಚರ್ಚಿಸಿ ಎಂದು ಸೂಚನೆ ನೀಡಿದ್ದರು. ದಲಿತ ಮಠಾಧೀಶರು ನಮ್ಮ ಬೆಂಬಲ ನೀಡಿದ್ದಾರೆ. ರಾಜಕೀಯವಾಗಿ ರಾಯಣ್ಣ ಬ್ರಿಗೇಡ್‌ ಬಳಸಿಕೊಳ್ಳದಿದ್ದರೇ ನಾವು ನಿಮ್ಮ ಬೆಂಬಲಕ್ಕಿರುತ್ತೇವೆಂದು ಭರವಸೆ ನೀಡಿದ್ದಾರೆ ಎಂದು ಈಶ್ವರಪ್ಪ ತಿಳಿಸಿದರು.  
 
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ವೇದಿಕೆ ಬಿಟ್ಟು ಪ್ರತ್ಯೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೈಬಿಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ಲಾಲ್ ಅವರು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರಿಗೆ ತಾಕೀತು ಮಾಡಿದ್ದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಪಿ ಯೋಗೇಶ್ವರ್ ಫ್ಯಾಮಿಲಿ ಮ್ಯಾಟರ್: ರಣದೀಪ್ ಸುರ್ಜೇವಾಲಗೆ ದೂರು ಕೊಟ್ಟ ಪತ್ನಿ

ರಾಜಸ್ಥಾನದ ಚುರುವಿನಲ್ಲಿ ವಾಯುಪಡೆಯ ಜಾಗ್ವಾರ್ ಫೈಟರ್ ಪತನ: ಪೈಲಟ್ ಸಾವು

ಗುಜರಾತ್‌: ಸೇತುವೆ ಮುರಿದು ನದಿಗೆ ಬಿದ್ದ ವಾಹನಗಳು, 9ಮಂದಿ ಸಾವು

ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ ತಹವ್ವುರ್ ರಾಣಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನಮ್ಮ ಪಕ್ಷದ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಬಿಕೆ ಹರಿಪ್ರಸಾದ್ ಗೆ ಟಾಂಗ್ ಕೊಟ್ಟ ವಿಜಯೇಂದ್ರ

ಮುಂದಿನ ಸುದ್ದಿ
Show comments