Select Your Language

Notifications

webdunia
webdunia
webdunia
webdunia

ಭಿನ್ನಮತ ದೆಹಲಿಗೆ ಶಿಫ್ಟ್: ದೆಹಲಿಗೆ ಹೊರಟ ಈಶ್ವರಪ್ಪ, ಅವರ ಬೆಂಬಲಿಗರು

ಯಡಿಯೂರಪ್ಪ
ಬೆಂಗಳೂರು , ಶನಿವಾರ, 2 ಜುಲೈ 2016 (13:43 IST)
ಪದಾಧಿಕಾರಿಗಳ ನೇಮಕವನ್ನು ಯಾವುದೇ ಕಾರಣಕ್ಕು ಪರಿಷ್ಕರಿಸುವುದಿಲ್ಲ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಯಿಂದ ಆಕ್ರೋಶಗೊಂಡಿರುವ ಬಿಜೆಪಿ ಹಿರಿಯ ಕೆ.ಎಸ್.ಈಶ್ವರಪ್ಪ ಮತ್ತು ಅವರ ಬೆಂಬಲಿಗರು ಇಂದು ಸಂಜೆ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚೆ ನಡೆಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪದಾಧಿಕಾರಿಗಳ ನೇಮಕದಲ್ಲಿ ಗೊಂದಲಗಳಾಗಿದ್ದರಿಂದ ಪಟ್ಟಿಯನ್ನು ರದ್ದುಗೊಳಿಸಿ, ಕೋರ್ ಕಮಿಟಿಯಲ್ಲಿ ಚರ್ಚಿಸಿದ ನಂತರ ಪದಾಧಿಕಾರಿಗಳ ನೇಮಕಕ್ಕೆ ಚಾಲನೆ ನೀಡಿ ಎಂದು ಈಶ್ವರಪ್ಪ ಬಣ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರಿಗೆ ಮನವಿ ಮಾಡಿತ್ತು.
 
ಯಡಿಯೂರಪ್ಪ ಬೆಂಗಳೂರಲ್ಲಿ ಕುಳಿತು ರಾಜ್ಯದ 30 ಜಿಲ್ಲೆಗಳ ಪದಾಧಿಕಾರಿಗಳ ನೇಮಕ ಮಾಡಿದ್ದಾರೆ. ಆಯಾ ಜಿಲ್ಲೆಗಳಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸದೆ ನಿರ್ಧಾರ ತೆಗೆದುಕೊಂಡಿರುವುದು ಬಿಜೆಪಿಗೆ ನೀತಿಗೆ ಒಪ್ಪುವುದಿಲ್ಲ ಎಂದು ಈಶ್ವರಪ್ಪ ಗುಡುಗಿದ್ದರು.
 
ಸಾವಿರಾರು ಕಾರ್ಯಕರ್ತರು ತಮ್ಮ ನೋವನ್ನು ನನ್ನೊಂದಿಗೆ ಹಂಚಿಕೊಂಡಿದ್ದಾರೆ. ಹಲವು ವರ್ಷಗಳಿಂದ ಪಕ್ಷದಲ್ಲಿ ದುಡಿದವರಿಗೆ ಸ್ಥಾನ ನಿರಾಕರಿಸಲಾಗಿದೆ. ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಹಿಂಬಾಲಕರಿಗೆ ಮಾತ್ರ ಸ್ಥಾನ ನೀಡಲಾಗಿದೆ. ಕರಂದ್ಲಾಜೆ ಮಾತು ಕೇಳಿ ಯಡಿಯೂರಪ್ಪ ಪದಾಧಿಕಾರಿಗಳ ನೇಮಕ ಮಾಡಿದ್ದಾರೆ ಎಂದು ಈಶ್ವರಪ್ಪ ಬಣ ಆರೋಪಿಸಿದೆ.
 
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪದಾಧಿಕಾರಿಗಳ ನೇಮಕ ರದ್ದುಗೊಳಿಸುವುದಿಲ್ಲ ಎಂದು ತಿಳಿದ ಕೆ.ಎಸ್.ಈಶ್ವರಪ್ಪ ಮತ್ತು ಅವರ ಬೆಂಬಲಿಗರು ದೆಹಲಿಗೆ ತೆರಳಿ ಪಕ್ಷದ ವರಿಷ್ಠರ ಮುಂದೆ ಯಡಿಯೂರಪ್ಪನವರ ಸರ್ವಾಧಿಕಾರಿ ಧೋರಣೆ ವಿರುದ್ಧ ದೂರು ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

 ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಶಿಸ್ತಿನಿಂದ ವರ್ತಿಸಿದರೆ ಕಠಿಣ ಕ್ರಮ: ಈಶ್ವರಪ್ಪಗೆ ಯಡಿಯೂರಪ್ಪ ಪರೋಕ್ಷ ಎಚ್ಚರಿಕೆ