Webdunia - Bharat's app for daily news and videos

Install App

ಕೆ.ಎಸ್.ಈಶ್ವರಪ್ಪ ಮುಂದಿನ ಮುಖ್ಯಮಂತ್ರಿ: ಬಿಜೆಪಿ ಪಾಳಯದಲ್ಲಿ ಹೊಸ ಬಾಂಬ್

Webdunia
ಶುಕ್ರವಾರ, 6 ಜನವರಿ 2017 (15:30 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಿರುವುದಾಗಿ ಹೇಳುತ್ತಾ ಬಂದಿದ್ದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಇದೀಗ ತಾವೇ ಮುಖ್ಯಮಂತ್ರಿಯಾಗಲು ಹೊರಟಿದ್ದಾರೆ.
 
ರಾಯಣ್ಣ ಬ್ರಿಗೇಡ್ ಸದಸ್ಯರು ಕೆ.ಎಸ್.ಈಶ್ವರಪ್ಪ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ಭಿತ್ತಿಪತ್ರಗಳನ್ನು ಹಂಚುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ. 
 
ರಾಯಣ್ಣ ಬ್ರಿಗೇಡ್‌ನ ಚಟುವಟಿಕೆಗಳನ್ನು ನಿಲ್ಲಿಸುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿತ್ತು. ಆದರೆ, ಇದೀಗ ರಾಯಣ್ಣ ಬ್ರಿಗೇಡ್ ಸದಸ್ಯರು ಮುಂದಿನ ಮುಖ್ಯಮಂತ್ರಿ ಈಶ್ವರಪ್ಪ ಅವರೇ ಎಂಬ ಭಿತ್ತಿಪತ್ರಗಳನ್ನು ಹಂಚುತ್ತಿರುವ ಮೂಲಕ ರಾಜ್ಯ ಬಿಜೆಪಿ ಪಾಳಯದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments