Webdunia - Bharat's app for daily news and videos

Install App

ಕೆ.ಎಸ್. ಈಶ್ವರಪ್ಪ ನಮ್ಮ ಮುಂದಿನ ಸಿಎಂ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್

Webdunia
ಶನಿವಾರ, 3 ಸೆಪ್ಟಂಬರ್ 2016 (17:58 IST)
ಇಂದು ನಡೆದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪರನ್ನು ಮುಖ್ಯಮಂತ್ರಿಯಾಗಿಸುವ ಕುರಿತಂತೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
 
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಸಿಎಂ ಮಾಡುವ ಕುರಿತಂತೆ ಬ್ರಿಗೇಡ್‌ನಲ್ಲಿ ಚರ್ಚೆ ನಡೆದಿರುವುದು ಸತ್ಯ. ಮುಂಬರುವ ದಿನಗಳಲ್ಲಿ ಯಾವ ರೀತಿ ಬೆಳವಣಿಗೆಗಳಾಗಲಿವೆ ಎನ್ನುವುದನ್ನು ನೋಡಿ ಮುಂದಿನ ಹೆಜ್ಜೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ.
 
ಇಂದು ಬೆಳಿಗ್ಗೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಚನೆ ಕುರಿತಂತೆ ಕೆಲ ಹಿರಿಯ ವಕೀಲರೊಂದಿಗೆ ಚರ್ಚೆ ನಡೆಸಿದ ಈಶ್ವರಪ್ಪ, ಬ್ರಿಗೇಡ್‌ನ ರೂಪರೇಷೆಗಳು ಹೇಗಿರಬೇಕು ಎನ್ನುವ ಬಗ್ಗೆ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಯಡಿಯೂರಪ್ಪ ಯಾವುದೇ ಬ್ರಿಗೇಡ್ ರಚನೆ ಬೇಡ, ಪಕ್ಷದೊಳಗೆ ಹಲವಾರು ಹಿಂದ ವಿಭಾಗಗಳಿವೆ ಅವುಗಳನ್ನು ಬಲಪಡಿಸಲು ಪ್ರಯತ್ನಿಸಿ ಎಂದು ಈಗಾಗಲೇ ಸಲಹೆ ನೀಡಿದ್ದಾರೆ.
 
ಆದರೆ, ಈಶ್ವರಪ್ಪ ಮಾತ್ರ ಆನೆ ನಡೆದಿದ್ದೆ ದಾರಿ ಎನ್ನುವಂತೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ಕುರಿತಂತೆ ಚಿಂತನೆ ನಡೆಸಿರುವುದು ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣ ಸೃಷ್ಟಿಯಾಗಿದೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments