ರಾಜ್ಯ ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ನಾಯಕರ ಭಿನ್ನಮತ ಹಿನ್ನೆಲೆಯಲ್ಲಿ ಕುರುಬ ಸಮಾಜ ಸಂಘಟನೆಯನ್ನು ಬಲವರ್ಧನೆಗೊಳಿಸಲು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ರಣತಂತ್ರ ರೂಪಿಸಿದ್ದಾರೆ.
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕುರುಬ ಸಮಾಜ ಸಂಘಟನೆ ಬಲವರ್ಧನೆಗಾಗಿ ಗಂಭೀರವಾಗಿ ಚಿಂತಿಸುತ್ತಿರುವ ಕೆ.ಎಸ್.ಈಶ್ವರಪ್ಪನವರು ಇಂದು ಅಹಿಂದ ಸಮಾಜದ ಮುಖಂಡ ಮುಕುಡಪ್ಪ ಸೇರಿದಂತೆ ಹಲವು ನಾಯಕರೊಂದಿಗೆ ಕಬ್ಬನ್ ಪಾರ್ಕ್ ಸೆಕ್ರೆಟರಿಯಟ್ ಕ್ಲಬ್ನಲ್ಲಿ ಸಭೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ