Webdunia - Bharat's app for daily news and videos

Install App

ರಾಜ್ಯ ಬಿಜೆಪಿ ಗೊಂದಲ: ವರಿಷ್ಠರ ಜತೆ ಚರ್ಚೆಗೆ ಈಶ್ವರಪ್ಪ ನಿರ್ಧಾರ

Webdunia
ಗುರುವಾರ, 30 ಜೂನ್ 2016 (12:51 IST)
ಪದಾಧಿಕಾರಿಗಳ ನೇಮಕ ಕುರಿತಂತೆ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗಾಗಿ ವರಿಷ್ಠರ ಜೊತೆ ಚರ್ಚಿಸಲು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪದಾಧಿಕಾರಿಗಳ ನೇಮಕಾತಿಯಲ್ಲಿ ತಾರತಮ್ಯವೆಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಈಶ್ವರಪ್ಪ, ಸಮಯ ದೊರೆತ ಕೂಡಲೇ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ದೆಹಲಿಯಲ್ಲಿರುವ ವರಿಷ್ಠರು ಸಮಯ ನೀಡಿದ ಕೂಡಲೇ ದೆಹಲಿಗೆ ತೆರಳಿ ರಾಜ್ಯ ಬಿಜೆಪಿಯಲ್ಲಿ ಎದುರಾಗಿರುವ ಗೊಂದಲಗಳ ನಿವಾರಣೆಗೆ ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಯಡಿಯೂರಪ್ಪ ಧೋರಣೆಯಿಂದ ನೊಂದಿರುವ ಕೆ.ಎಸ್.ಈಶ್ವರಪ್ಪ, ಪದಾಧಿಕಾರಿಗಳ ನೇಮಕಾತಿಯಲ್ಲಿ ತಮ್ಮನ್ನು ಕಡೆಗೆಣಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಪದಾಧಿಕಾರಿಗಳ ನೇಮಕ ಇನ್ನೂ ಗೊಂದಲದಲ್ಲಿರುವಂತೆಯೇ ಜಿಲ್ಲಾ ಪ್ರಭಾರಿಗಳ ನೇಮಕ ಮಾಡಿರುವ ಯಡಿಯೂರಪ್ಪ ಕ್ರಮ ಕೆಲ ಬಿಜೆಪಿ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments