Webdunia - Bharat's app for daily news and videos

Install App

ವಿಪಕ್ಷ ಸ್ಥಾನದಿಂದ ಕೆ.ಎಸ್.ಈಶ್ವರಪ್ಪಗೆ ಕೊಕ್?

Webdunia
ಗುರುವಾರ, 12 ಜನವರಿ 2017 (12:26 IST)
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ಸಕ್ರಿಯವಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಸ್ಥಾನದಿಂದ ಕೆ.ಎಸ್.ಈಶ್ವರಪ್ಪ ಅವರನ್ನು ಕೈಬಿಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
 
ಆಗ್ನೇಯ ಶಿಕ್ಷಕ ಕ್ಷೇತ್ರದ ಉಪಚುನಾವಣೆ ಸಿದ್ಧತೆಯ ಹೆಸರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪರಿಷತ್ ಸದಸ್ಯರ ಸಭೆ ಕರೆಯಲಾಗಿದೆ. ಆದರೆ, ಈ ಮಹತ್ವದ ಸಭೆಗೆ ಕೆ.ಎಸ್.ಈಶ್ವರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ ಎಂದು ತಿಳಿದು ಬಂದಿದೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು. ಆದರೆ, ರಾಯಣ್ಣ ಬ್ರಿಗೇಡ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದ್ದರು. 
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಸಕ್ರಿಯ ಕಾರ್ಯಕರ್ತರಾಗಿ ಯಡಿಯೂರಪ್ಪ ಅವರ ಕೆಂಗಣ್ಣಿಗೆ ಗುರಿ ಆಗಿರುವ ಕೆ.ಎಸ್.ಈಶ್ವರಪ್ಪ ಅವರನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಸ್ಥಾನದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವ ಇಲಾಖೆ ನೋಡಿದ್ರೂ ಕಮಿಷನ್ ಕಮಿಷನ್ ಕಮಿಷನ್: ಬಿವೈ ವಿಜಯೇಂದ್ರ

ಭಷ್ಟಚಾರ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಜಮೀರ್ ಅಹ್ಮದ್‌

Viral video: ತನ್ನ ಪಾಡಿಗೆ ತಾನು ಹೋಗುತ್ತಿದ್ದ ಮಹಿಳೆಯ ನಡು ರಸ್ತೆಯಲ್ಲೇ ಎಳೆದಾಡಿದ ಯುವಕರು

‌ತಿರುಮಲ ವೆಂಕಟೇಶ್ವರ ದೇವರ ಭಕ್ತರಿಗೆ ಗುಡ್‌ನ್ಯೂಸ್‌: ಲಡ್ಡುಗಾಗಿ ಇನ್ನೂ ಗಂಟೆಗಟ್ಟಲೆ ಕಾಯಬೇಕಿಲ್ಲ

ಅಮೀರ್ ಖಾನ್ ಭೇಟಿಯಾದ ಸಿಎಂ ಸಿದ್ದರಾಮಯ್ಯ ಸಂವೇದನಾಶೀಲ ನಟ ಎಂದಿದ್ದೇ ತಪ್ಪಾಯ್ತು

ಮುಂದಿನ ಸುದ್ದಿ
Show comments